ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm