ಬ್ರೇಕಿಂಗ್ ನ್ಯೂಸ್
30-09-24 11:03 pm HK News Desk ದೇಶ - ವಿದೇಶ
ಅಹಮದಾಬಾದ್, ಸೆ 30: ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ ಅವರ ಫೋಟೋ ಉಪಯೋಗಿಸಿಕೊಂಡು ಗುಜರಾತ್ನ ಅಹಮದಾಬಾದ್ನ ಚಿನ್ನದ ವ್ಯಾಪಾರಿಗೆ ಇಬ್ಬರು 1.30 ಕೋಟಿ ಉಂಡೆನಾಮ ತಿಕ್ಕಿದ್ದಾರೆ.
ಹೌದು, ಕೇಳಲು ಇದು ವಿಚಿತ್ರವಾದರೂ ಸತ್ಯ. ಅಹಮದಾಬಾದ್ನ ಮಾಣಿಕ್ ಚೌಕ್ನ ಚಿನ್ನದ ವ್ಯಾಪಾರಿ ಮೆಹುಲ್ ಠಕ್ಕರ್ ಅವರ ಬಳಿ ಎರಡು ಕೆಜಿ ಚಿನ್ನ ಖರೀದಿಗೆ ಖತರ್ನಾಕ್ ಕಳ್ಳರಿಬ್ಬರು 1.60 ಕೋಟಿಗೆ ಒಪ್ಪಂದ ಮಾಡಿಕೊಂಡಿದ್ದರು. ಅದ್ರಂತೆ ಮೊದಲ ಕಂತಿನಲ್ಲಿ 1.30 ಕೋಟಿ ಎರಡನೇ ಕಂತಿನಲ್ಲಿ 30 ಲಕ್ಷ ಕೊಡುವುದಾಗಿ ಹೇಳಿದ್ದರು. ಆ ನಂತರ ಕೊಟ್ಟಿರುವ ಮಾತಿನಂತೆ 1.30 ಕೋಟಿ ಹಣ ನೀಡಲು ಬ್ಯಾಗ್ ಸಮೇತ ಬಂದಿದ್ದರು. ಆದರೆ, ಆ ಬ್ಯಾಗ್ ನಲ್ಲಿ ಅಸಲಿ ಹಣವನ್ನು ಇಡದ ಇಬ್ಬರು ಮೆಹುಲ್ ಠಕ್ಕರ್ ಅವರನ್ನು ನಂಬಿಸಲು 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳ ಮೇಲೆ ಕೆಲ ಅಸಲಿ ನೋಟುಗಳನ್ನು ಇಟ್ಟಿದ್ದರು. ಆ ನಂತರ ಮೆಹುಲ್ ಠಕ್ಕರ್ ಅವರ ನಂಬಿಕೆಯನ್ನು ಗಳಿಸಿದ ಇಬ್ಬರು, ಇನ್ನೊಂದು ಅಂಗಡಿಯಲ್ಲಿ ಚಿನ್ನ ಖರೀದಿಸಬೇಕಿದೆ ಎಂದು ಕಾಲ್ಕಿತ್ತರು.

ಹೀಗೆ ಹಣ ಸಿಕ್ಕ ಖುಷಿಯಲ್ಲಿ ಯಂತ್ರದ ಸಹಾಯದಿಂದ ಹಣ ಎಣಿಸಲು ಮೆಹುಲ್ ಠಕ್ಕರ್ ಮತ್ತು ಅಂಗಡಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಭರತ್ ಜೋಶಿ ಮುಂದಾಗಿದ್ದಾರೆ. 26 ಕಟ್ಟುಗಳಿದ್ದ 500 ರೂಪಾಯಿಯಲ್ಲಿ ಮಹಾತ್ಮಾ ಗಾಂಧೀಜಿಯ ಬದಲು ಅನುಪಮ್ ಖೇರ್ ಫೋಟೋ ಕಂಡು ಬೆಚ್ಚಿ ಬಿದ್ದಿದ್ದಾರೆ. ಅಹಮದಾಬಾದ್ನ ನವರಂಗ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 24ರಂದು ಈ ವಂಚನೆ ನಡೆದಿದ್ದು ಸದ್ಯ ಮೆಹುಲ್ ಠಕ್ಕರ್ ಅವರ ಅಂಗಡಿಯ ಬಳಿ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ. ಬಂಧನಕ್ಕೆ ಬೆಲೆ ಬೀಸಿದ್ದಾರೆ.
ಸದ್ಯಕ್ಕೆ ಅನುಪಮ್ ಖೇರ್ ಫೋಟೋ ಇರುವ 500 ರೂಪಾಯಿ ಮುಖಬೆಲೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಟ್ರೋಲಿಗರಿಗೆ ಆಹಾರವೂ ಆಗಿದೆ. ಇನ್ನೂ ಮಹಾತ್ಮಾ ಗಾಂಧಿ ಅವರ ಬದಲು ತಮ್ಮ ಭಾವಚಿತ್ರವನ್ನು 500 ರೂಪಾಯಿ ಮೇಲಿರುವುದನ್ನು ನೋಡಿರುವ ಅನುಪಮ್ ಖೇರ್, ತಮ್ಮ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಈ ಪ್ರಕರಣದ ಕುರಿತು ಬರೆದುಕೊಂಡಿದ್ಧಾರೆ.ಇದೊಳ್ಳೆ ಕಥೆ ಐನೂರು ರೂಪಾಯಿ ಫೋಟೊ ಮೇಲೆ ಗಾಂಧೀಜಿಯ ಬದಲು ನನ್ನ ಫೋಟೊ, ಇಲ್ಲಿ ಏನ್ ಬೇಕಾದರೂ ಆಗಬಹುದು ಎಂದಿದ್ದಾರೆ. ಟಿವಿ9 ಗುಜರಾತ್ ನ ವರದಿಯನ್ನೂ ಕೂಡ ಅನುಪಮ್ ಖೇರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Actor Anupam Kher expressed shock after an Ahmedabad trader was duped with fake ₹500 notes which featured the photo of the actor instead of Mahatma Gandhi.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm