ಬ್ರೇಕಿಂಗ್ ನ್ಯೂಸ್
30-09-24 11:03 pm HK News Desk ದೇಶ - ವಿದೇಶ
ಅಹಮದಾಬಾದ್, ಸೆ 30: ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ ಅವರ ಫೋಟೋ ಉಪಯೋಗಿಸಿಕೊಂಡು ಗುಜರಾತ್ನ ಅಹಮದಾಬಾದ್ನ ಚಿನ್ನದ ವ್ಯಾಪಾರಿಗೆ ಇಬ್ಬರು 1.30 ಕೋಟಿ ಉಂಡೆನಾಮ ತಿಕ್ಕಿದ್ದಾರೆ.
ಹೌದು, ಕೇಳಲು ಇದು ವಿಚಿತ್ರವಾದರೂ ಸತ್ಯ. ಅಹಮದಾಬಾದ್ನ ಮಾಣಿಕ್ ಚೌಕ್ನ ಚಿನ್ನದ ವ್ಯಾಪಾರಿ ಮೆಹುಲ್ ಠಕ್ಕರ್ ಅವರ ಬಳಿ ಎರಡು ಕೆಜಿ ಚಿನ್ನ ಖರೀದಿಗೆ ಖತರ್ನಾಕ್ ಕಳ್ಳರಿಬ್ಬರು 1.60 ಕೋಟಿಗೆ ಒಪ್ಪಂದ ಮಾಡಿಕೊಂಡಿದ್ದರು. ಅದ್ರಂತೆ ಮೊದಲ ಕಂತಿನಲ್ಲಿ 1.30 ಕೋಟಿ ಎರಡನೇ ಕಂತಿನಲ್ಲಿ 30 ಲಕ್ಷ ಕೊಡುವುದಾಗಿ ಹೇಳಿದ್ದರು. ಆ ನಂತರ ಕೊಟ್ಟಿರುವ ಮಾತಿನಂತೆ 1.30 ಕೋಟಿ ಹಣ ನೀಡಲು ಬ್ಯಾಗ್ ಸಮೇತ ಬಂದಿದ್ದರು. ಆದರೆ, ಆ ಬ್ಯಾಗ್ ನಲ್ಲಿ ಅಸಲಿ ಹಣವನ್ನು ಇಡದ ಇಬ್ಬರು ಮೆಹುಲ್ ಠಕ್ಕರ್ ಅವರನ್ನು ನಂಬಿಸಲು 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳ ಮೇಲೆ ಕೆಲ ಅಸಲಿ ನೋಟುಗಳನ್ನು ಇಟ್ಟಿದ್ದರು. ಆ ನಂತರ ಮೆಹುಲ್ ಠಕ್ಕರ್ ಅವರ ನಂಬಿಕೆಯನ್ನು ಗಳಿಸಿದ ಇಬ್ಬರು, ಇನ್ನೊಂದು ಅಂಗಡಿಯಲ್ಲಿ ಚಿನ್ನ ಖರೀದಿಸಬೇಕಿದೆ ಎಂದು ಕಾಲ್ಕಿತ್ತರು.
ಹೀಗೆ ಹಣ ಸಿಕ್ಕ ಖುಷಿಯಲ್ಲಿ ಯಂತ್ರದ ಸಹಾಯದಿಂದ ಹಣ ಎಣಿಸಲು ಮೆಹುಲ್ ಠಕ್ಕರ್ ಮತ್ತು ಅಂಗಡಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಭರತ್ ಜೋಶಿ ಮುಂದಾಗಿದ್ದಾರೆ. 26 ಕಟ್ಟುಗಳಿದ್ದ 500 ರೂಪಾಯಿಯಲ್ಲಿ ಮಹಾತ್ಮಾ ಗಾಂಧೀಜಿಯ ಬದಲು ಅನುಪಮ್ ಖೇರ್ ಫೋಟೋ ಕಂಡು ಬೆಚ್ಚಿ ಬಿದ್ದಿದ್ದಾರೆ. ಅಹಮದಾಬಾದ್ನ ನವರಂಗ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 24ರಂದು ಈ ವಂಚನೆ ನಡೆದಿದ್ದು ಸದ್ಯ ಮೆಹುಲ್ ಠಕ್ಕರ್ ಅವರ ಅಂಗಡಿಯ ಬಳಿ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ. ಬಂಧನಕ್ಕೆ ಬೆಲೆ ಬೀಸಿದ್ದಾರೆ.
ಸದ್ಯಕ್ಕೆ ಅನುಪಮ್ ಖೇರ್ ಫೋಟೋ ಇರುವ 500 ರೂಪಾಯಿ ಮುಖಬೆಲೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಟ್ರೋಲಿಗರಿಗೆ ಆಹಾರವೂ ಆಗಿದೆ. ಇನ್ನೂ ಮಹಾತ್ಮಾ ಗಾಂಧಿ ಅವರ ಬದಲು ತಮ್ಮ ಭಾವಚಿತ್ರವನ್ನು 500 ರೂಪಾಯಿ ಮೇಲಿರುವುದನ್ನು ನೋಡಿರುವ ಅನುಪಮ್ ಖೇರ್, ತಮ್ಮ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಈ ಪ್ರಕರಣದ ಕುರಿತು ಬರೆದುಕೊಂಡಿದ್ಧಾರೆ.ಇದೊಳ್ಳೆ ಕಥೆ ಐನೂರು ರೂಪಾಯಿ ಫೋಟೊ ಮೇಲೆ ಗಾಂಧೀಜಿಯ ಬದಲು ನನ್ನ ಫೋಟೊ, ಇಲ್ಲಿ ಏನ್ ಬೇಕಾದರೂ ಆಗಬಹುದು ಎಂದಿದ್ದಾರೆ. ಟಿವಿ9 ಗುಜರಾತ್ ನ ವರದಿಯನ್ನೂ ಕೂಡ ಅನುಪಮ್ ಖೇರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Actor Anupam Kher expressed shock after an Ahmedabad trader was duped with fake ₹500 notes which featured the photo of the actor instead of Mahatma Gandhi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm