ಬ್ರೇಕಿಂಗ್ ನ್ಯೂಸ್
02-10-24 02:10 pm HK News Desk ದೇಶ - ವಿದೇಶ
ಚೆನ್ನೈ, ಅ.2: ಕೊಯಮತ್ತೂರಿನ ಇಶಾ ಫೌಂಡೇಶನ್ ಆಶ್ರಮದ ಮೇಲೆ 150 ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಇಶಾ ಫೌಂಡೇಶನ್ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾಳಿ ನಡೆಸಲಾಗಿದೆ.
ನಿವೃತ್ತ ಪ್ರಾಧ್ಯಾಪಕ ಡಾ. ಕಾಮರಾಜ್ ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿ, ತನ್ನ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ (42) ಮತ್ತು ಲತಾ ಕಾಮರಾಜ್ (39) ಅವರನ್ನು ಬಲವಂತವಾಗಿ ಫೌಂಡೇಶನ್ನಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದರು. ಇಶಾ ಫೌಂಡೇಶನ್ ತನ್ನಿಬ್ಬರು ಮಕ್ಕಳನ್ನು ಸನ್ಯಾಸಿಗಳನ್ನಾಗಿ ಮಾಡಿ ಅವರ ಕುಟುಂಬದೊಂದಿಗೆ ಸಂಪರ್ಕ ಕಡಿದುಕೊಳ್ಳುವಂತೆ ಮಾಡಿದೆ ಎಂದು ಪ್ರಾಧ್ಯಾಪಕರು ಆರೋಪಿಸಿದ್ದಾರೆ.
ನ್ಯಾಯಮೂರ್ತಿ ಎಸ್.ಎಂ. ಸುಬ್ರಮಣ್ಯಂ ಮತ್ತು ವಿ.ಶಿವಗಣನಂ ಅವರ ದ್ವಿಸದಸ್ಯ ಪೀಠವು ತಮ್ಮ ಮಗಳಿಗೆ ಮದುವೆ ಮಾಡಿ ಸುಖಮಯ ಜೀವನ ನೀಡಿದ ಸದ್ಗುರುಗಳು ಇತರ ಯುವತಿಯರಿಗೆ ತಲೆ ಬೋಳಿಸಿಕೊಂಡು ತಪಸ್ಸಿನ ಜೀವನ ನಡೆಸುವಂತೆ ಪ್ರೇರೇಪಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿತ್ತು. ಇಶಾ ಫೌಂಡೇಶನ್ ವೈದ್ಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ತನ್ನ ಒಬ್ಬಳು ಪುತ್ರಿಯನ್ನು ಜೂನ್ 15ರಂದು ಫೋನಲ್ಲಿ ಸಂಪರ್ಕಿಸಿದಾಗ, ಆಕೆ ಉಪವಾಸ ವ್ರತದಲ್ಲಿದ್ದು ಅದೇ ರೀತಿ ಸಾಯುವುದಕ್ಕಾಗಿ ದೇಹತ್ಯಾಗ ಮಾಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಳೆಂದು ಕಾಮರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಹೈಕೋರ್ಟ್ ವಿಚಾರಣೆ ಬಳಿಕ ಕೊಯಂಬತ್ತೂರು ಪೊಲೀಸರಿಗೆ ಫೌಂಡೇಶನ್ ಕುರಿತ ಆರೋಪ, ವಾಸ್ತವ ಸ್ಥಿತಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ನಾವು ಯಾರಿಗೂ ಸೂಚನೆ ಕೊಡುವುದಿಲ್ಲ
ಈ ನಡುವೆ, ಇಶಾ ಫೌಂಡೇಶನ್ ಕಡೆಯಿಂದ ಮಂಗಳವಾರ ಹೇಳಿಕೆ ನೀಡಲಾಗಿದ್ದು ನಾವು ಯಾರನ್ನೂ ಮದುವೆಯಾಗಿ ಅಥವಾ ಸನ್ಯಾಸಿ ಆಗಿ ಎಂದು ಹೇಳುವುದಿಲ್ಲ. ಜನರಿಗೆ ಯೋಗ, ಆಧ್ಯಾತ್ಮ ಬಗ್ಗೆ ತಿಳಿಸುವುದಕ್ಕಾಗಿ ಇಶಾ ಫೌಂಡೇಶನ್ ಅನ್ನು ಸದ್ಗುರು ಸ್ಥಾಪಿಸಿದ್ದಾರೆ. ಇಲ್ಲಿಗೆ ಬರುವ ವಯಸ್ಕರು ತಮ್ಮ ದಾರಿಯನ್ನು ಕಂಡುಕೊಳ್ಳಲು ಅವರೇ ಸ್ವತಂತ್ರರಿದ್ದಾರೆ. ನಾವು ಮದುವೆಯಾಗಿ ಅಥವಾ ಸನ್ಯಾಸಿಯಾಗಿ ಎಂದು ಯಾರಿಗೂ ಸೂಚಿಸುವುದಿಲ್ಲ. ಇವೆಲ್ಲ ವ್ಯಕ್ತಿಯ ವೈಯಕ್ತಿಕ ನಿರ್ಧಾರಗಳು. ಇಶಾ ಫೌಂಡೇಶನ್ ಸಾವಿರಾರು ಮಂದಿಗೆ ಆಶ್ರಯ ನೀಡಿದೆ. ಅವರೆಲ್ಲ ಸನ್ಯಾಸಿಗಳಲ್ಲ. ಕೆಲವರಷ್ಟೇ ಬ್ರಹ್ಮಚರ್ಯ ಅಥವಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಈಗ ವಿಷಯ ಕೋರ್ಟಿಗೆ ಹೋಗಿದ್ದು ಸತ್ಯ ಹೊರಬರಲಿದೆ. ಅನಗತ್ಯವಾಗಿ ವಿವಾದ ಸೃಷ್ಟಿಸುವುದಕ್ಕೆ ಕೊನೆ ಬೀಳಲಿದೆ ಎಂದು ತಿಳಿಸಿದ್ದಾರೆ.
Police personnel and officials of the Social Welfare Department conducted an inquiry at the Isha Yoga Center in Coimbatore on Tuesday, a day after the Madras High Court directed the police to submit a status report on the allegations raised by a petitioner against the Isha Foundation.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm