ಬ್ರೇಕಿಂಗ್ ನ್ಯೂಸ್
04-10-24 07:10 pm HK News Desk ದೇಶ - ವಿದೇಶ
ನವದೆಹಲಿ, ಅ.4: ತಿರುಪತಿ ದೇವಸ್ಥಾನದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗೆ ಸಿಬಿಐ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ನೇಮಿಸಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಈ ವಿಷಯದ ಬಗ್ಗೆ ರಾಜಕೀಯ ಡ್ರಾಮವನ್ನು ಬಯಸುವುದಿಲ್ಲ, ಏಕೆಂದರೆ ಇದು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಎಸ್ಐಟಿ ತಂಡವು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಆಹಾರ ನಿಯಂತ್ರಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ಹಿರಿಯ ಅಧಿಕಾರಿಗಳನ್ನು ಒಳಗೊಂಡಿರುತ್ತದೆ. ಆರೋಪ ಮತ್ತು ಪ್ರತ್ಯಾರೋಪಗಳ ವಿಚಾರಕ್ಕೆ ಹೋಗುವುದಿಲ್ಲ. ನ್ಯಾಯಾಲಯವನ್ನು ರಾಜಕೀಯಕ್ಕೆ ಬಳಸಲು ನಾವು ಅನುಮತಿಸುವುದೂ ಇಲ್ಲ ಎಂದು ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಹೇಳಿದೆ.
ಈಗಾಗಲೇ ಆಂಧ್ರಪ್ರದೇಶ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡದ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ ಈ ವಿಷಯ ಕೋಟ್ಯಂತರ ಭಕ್ತರ ಭಾವನೆಗೆ ಸಂಬಂಧಿಸಿರುವ ಕಾರಣ ಸಿಬಿಐ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ತಂಡ ತನಿಖೆ ನಡೆಸುವುದು ಸೂಕ್ತ ಎಂದು ಪೀಠ ಹೇಳಿದೆ.
ನಾವು ಆರೋಪಗಳು ಮತ್ತು ಪ್ರತ್ಯಾರೋಪಗಳ ಒಳ ಹೊಕ್ಕಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ರಾಜಕೀಯ ಹಿನ್ನೆಲೆಯಲ್ಲಿ ನ್ಯಾಯಾಲಯವನ್ನು ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಆಂಧ್ರ ಪ್ರದೇಶದ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡೆಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಹಿಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಕಳಪೆ ಹಾಗೂ ಕಲಬೆರಕೆ ತುಪ್ಪ ಮತ್ತು ಸಾಮಗ್ರಿಗಳನ್ನು ಬಳಸಿ ಲಡ್ಡು ತಯಾರಿಸಿದೆ ಎಂದು ಹಾಲಿ ಸಿಎಂ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಆರೋಪಿಸಿತ್ತು. ಲಡ್ಡು ವಿಚಾರ ಆಂಧ್ರದಲ್ಲಿ ತೀವ್ರ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.
Stating that it will “not allow the court to be used as a political battleground”, the Supreme Court Friday ordered that a new “independent” Special Investigation Team (SIT) will probe into the allegations of adulterated ghee being used in laddus distributed at Andhra Pradesh’s Tirupati temple under the previous YSRCP government.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm