ಬ್ರೇಕಿಂಗ್ ನ್ಯೂಸ್
05-10-24 06:40 pm HK News Desk ದೇಶ - ವಿದೇಶ
ನವದೆಹಲಿ, ಅ.5: 'ಇನ್ನು ಹೆಚ್ಚು ದಿನ ಇಸ್ರೇಲ್ ಉಳಿಯುವುದಿಲ್ಲ’ ಎಂದು ಇರಾನ್ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖೊಮೇನಿ ಹೇಳಿದ್ದಾರೆ. ಐದು ವರ್ಷಗಳಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಶುಕ್ರವಾರ ಟೆಹರಾನ್ನ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಅವರು ಮಾತನಾಡಿದರು.
ಖೊಮೇನಿ ಅವರು, ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನಿಯರು ಮತ್ತು ಲೆಬನಾನಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜೊತೆಗೆ ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ’ ಎಂದೂ ಬಣ್ಣಿಸಿದರು. ಹಮಾಸ್ ಅಥವಾ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್ ಹೆಚ್ಚು ಕಾಲ ಬಾಳಿಕೆ ಬರಲ್ಲ ಎಂದು ಖೊಮೇನಿ ಹೇಳುತ್ತಿದ್ದಂತೆ, ಮಸೀದಿ ಆವರಣದಲ್ಲಿ ಸೇರಿದ್ದ ಸಾವಿರಾರು ಜನರು “ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಘೋಷಣೆ ಮೊಳಗಿಸಿದರು.
ಐತಿಹಾಸಿಕ ಇಮಾಮ್ ಖೊಮೇನಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತನಾಡಿದ ಖೊಮೇನಿ ಅವರು ರಷ್ಯಾ ನಿರ್ಮಿತ ಡ್ರಾಗುನೋವ್ ರೈಫಲ್ ಹಿಡಿದಿದ್ದರು. ಪ್ರತಿಭಟನೆ ನಡೆಸುತ್ತಿರುವ ಲೆಬನಾನ್ ಮತ್ತು ಪ್ಯಾಲೆಸ್ತೀನಿಯರ ಬಗ್ಗೆ ಆಕ್ಷೇಪಿಸಲು ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳಿಗೆ ಅವಕಾಶವಿಲ್ಲ ಎಂದರು. ಭಾಷಣದಲ್ಲಿ ಖೊಮೇನಿ ಇತ್ತೀಚೆಗೆ ಇಸ್ರೇಲ್ ದಾಳಿಗೆ ಸಾವನ್ನಪ್ಪಿದ ಹೆಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾನನ್ನೂ ಹಾಡಿ ಹೊಗಳಿದರು. ವಿಶೇಷವೆಂದರೆ, ಈ ಭಾಷಣದ ವೇಳೆ ಖೊಮೇನಿ ಅವರು ತಮ್ಮ ಪಕ್ಕದಲ್ಲೇ ಗನ್ವೊಂದನ್ನು ಇರಿಸಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.
Iranian Supreme Leader Ayatollah Ali Khamenei delivered a rare Friday sermon defending this week’s missile attack on Israel that deepened fears of a regional war, while praising the “logical and legal” Hamas-led October 7 invasion and massacre in southern Israel that sparked the war in Gaza and fueled violence throughout the Middle East.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm