ಬ್ರೇಕಿಂಗ್ ನ್ಯೂಸ್
12-10-24 01:49 pm HK News Desk ದೇಶ - ವಿದೇಶ
ಕಾಸರಗೋಡು, ಅ.12: ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಸಂಬಂಧಿಸಿ ಆರೋಪಕ್ಕೆ ಒಳಗಾದ ಚಂದೇರ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಿ. ಅನೂಪ್ ಅವರನ್ನು ಕಾಸರಗೋಡು ಎಸ್ಪಿ ಅಮಾನತುಗೊಳಿಸಿದ್ದಾರೆ.
ಕಾಸರಗೋಡು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿದ್ದ ಪಿ. ಅನೂಪ್ ಅವರನ್ನು ಕರ್ತವ್ಯ ಲೋಪ ಆರೋಪದಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು. ಸೋಮವಾರ ಆಟೋ ಚಾಲಕ ಅಬ್ದುಲ್ ಸತ್ತಾರ್ ರೈಲ್ವೇ ನಿಲ್ದಾಣ ಸಮೀಪದ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಕಾಸರಗೋಡು ನಗರದ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿ ಅಬ್ದುಲ್ ಸತ್ತಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅನೂಪ್ ನೇತೃತ್ವದ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಆನಂತರ, ಆರೋಪಿ ಅಬ್ದುಲ್ ಸತ್ತಾರ್ ಠಾಣೆಗೆ ಹೋಗಿ ಆಟೋ ಕೊಡುವಂತೆ ಕೇಳಿಕೊಂಡರೂ ಬಿಟ್ಟು ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಘಟನೆ ಬಗ್ಗೆ ಮುಸ್ಲಿಂ ಮುಖಂಡರಿಂದ ಆಕ್ರೋಶ ಕೇಳಿಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಬಾಲಕೃಷ್ಣನ್ ನಾಯರ್ ಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಸೂಚಿಸಿದ್ದರು. ವರದಿ ಪಡೆದ ಬಳಿಕ ಸಬ್ ಇನ್ಸ್ ಪೆಕ್ಟರ್ ಅನೂಪ್ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ. ಅನೂಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ, ಮುಸ್ಲಿಂ ರಾಜಕೀಯ ಮುಖಂಡರು, ಸಂಘಟನೆಗಳು ಒತ್ತಾಯಿಸಿದ್ದವು. ಆಟೋ ಚಾಲಕ ಸಾರ್ವಜನಿಕರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಆತನ ಕಾಲರ್ ಹಿಡಿದು ಪೊಲೀಸರು ವಶಕ್ಕೆ ಪಡೆದ ವಿಡಿಯೋ ಹರಿದಾಡಿತ್ತು. ಅದೇ ನೆಪದಲ್ಲಿ ಎಸ್ಐ ಅನೂಪ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು.
In another heartbreaking case of police high-handedness, a veteran autorickshaw driver took his own life, driven by despair and in protest, after the Kasaragod Town Police Sub-Inspector refused to release his vehicle for five days over a petty offence.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm