ಬ್ರೇಕಿಂಗ್ ನ್ಯೂಸ್
12-10-24 01:49 pm HK News Desk ದೇಶ - ವಿದೇಶ
ಕಾಸರಗೋಡು, ಅ.12: ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಸಂಬಂಧಿಸಿ ಆರೋಪಕ್ಕೆ ಒಳಗಾದ ಚಂದೇರ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಿ. ಅನೂಪ್ ಅವರನ್ನು ಕಾಸರಗೋಡು ಎಸ್ಪಿ ಅಮಾನತುಗೊಳಿಸಿದ್ದಾರೆ.
ಕಾಸರಗೋಡು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿದ್ದ ಪಿ. ಅನೂಪ್ ಅವರನ್ನು ಕರ್ತವ್ಯ ಲೋಪ ಆರೋಪದಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು. ಸೋಮವಾರ ಆಟೋ ಚಾಲಕ ಅಬ್ದುಲ್ ಸತ್ತಾರ್ ರೈಲ್ವೇ ನಿಲ್ದಾಣ ಸಮೀಪದ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಕಾಸರಗೋಡು ನಗರದ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿ ಅಬ್ದುಲ್ ಸತ್ತಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅನೂಪ್ ನೇತೃತ್ವದ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಆನಂತರ, ಆರೋಪಿ ಅಬ್ದುಲ್ ಸತ್ತಾರ್ ಠಾಣೆಗೆ ಹೋಗಿ ಆಟೋ ಕೊಡುವಂತೆ ಕೇಳಿಕೊಂಡರೂ ಬಿಟ್ಟು ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಘಟನೆ ಬಗ್ಗೆ ಮುಸ್ಲಿಂ ಮುಖಂಡರಿಂದ ಆಕ್ರೋಶ ಕೇಳಿಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಬಾಲಕೃಷ್ಣನ್ ನಾಯರ್ ಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಸೂಚಿಸಿದ್ದರು. ವರದಿ ಪಡೆದ ಬಳಿಕ ಸಬ್ ಇನ್ಸ್ ಪೆಕ್ಟರ್ ಅನೂಪ್ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ. ಅನೂಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ, ಮುಸ್ಲಿಂ ರಾಜಕೀಯ ಮುಖಂಡರು, ಸಂಘಟನೆಗಳು ಒತ್ತಾಯಿಸಿದ್ದವು. ಆಟೋ ಚಾಲಕ ಸಾರ್ವಜನಿಕರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಆತನ ಕಾಲರ್ ಹಿಡಿದು ಪೊಲೀಸರು ವಶಕ್ಕೆ ಪಡೆದ ವಿಡಿಯೋ ಹರಿದಾಡಿತ್ತು. ಅದೇ ನೆಪದಲ್ಲಿ ಎಸ್ಐ ಅನೂಪ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು.
In another heartbreaking case of police high-handedness, a veteran autorickshaw driver took his own life, driven by despair and in protest, after the Kasaragod Town Police Sub-Inspector refused to release his vehicle for five days over a petty offence.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm