ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm