ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm