ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm