ಬ್ರೇಕಿಂಗ್ ನ್ಯೂಸ್
04-11-24 12:54 pm HK News Desk ದೇಶ - ವಿದೇಶ
ಒಟ್ಟಾವ, ನ 04: ಕೆನಡಾದ ಬ್ರಾಮ್ಟನ್ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ.
ಈ ದೇವಾಲಯವು ಟೊರೊಂಟೊದಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ದಾಳಿಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಾಲಿಸ್ತಾನಿ ಧ್ವಜ ಹಿಡಿದಿರುವುದು, ಭಕ್ತರನ್ನು ನಿಂದಿಸುತ್ತಾ ಹಲ್ಲೆ ನಡೆಸುತ್ತಿರುವುದು ವಿಡಿಯೊದಲ್ಲಿದೆ.
ಕೆನಡಾ ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಅವರು ವಿಡಿಯೊವನ್ನು ಹಂಚಿಕೊಂಡಿದ್ದು, 'ಮಿತಿ ಮೀರಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರೂ ಈ ಘಟನೆಯನ್ನು ಖಂಡಿಸಿದ್ದಾರೆ. 'ಬ್ರಾಂಪ್ಟನ್ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರ ಕೃತ್ಯವನ್ನು ಒಪ್ಪಲಾಗದು. ಕೆನಡಾದ ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಮುಕ್ತಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕು ಇದೆ' ಎಂದು ಹೇಳಿದ್ದಾರೆ. ಹಾಗೆಯೇ, ಸಮುದಾಯದ ರಕ್ಷಣೆ ಹಾಗೂ ಪ್ರಕರಣದ ತನಿಖೆ ನಿಟ್ಟಿನಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಿದ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಭಾರತ ಹಾಗೂ ಕೆನಡಾ ನಡುವಣ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹೊತ್ತಿನಲ್ಲೇ, ಈ ಆಘಾತಕಾರಿ ಘಟನೆ ನಡೆದಿದೆ.

2023ರ ಜೂನ್ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಪ್ರಧಾನಿ ಟ್ರುಡೊ ವರ್ಷದ ಹಿಂದೆ ಹೇಳಿದ್ದರು.
ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಇತ್ತೀಚೆಗೆ ಆರೋಪಿಸಿದ್ದಾರೆ.
ಇವುಗಳ ಪರಿಣಾಮವಾಗಿ ರಾಜತಾಂತ್ರಿಕ ಸಂಬಂಧ ಜಟಿಲಗೊಂಡಿರುವುದರ ನಡುವೆ, ಕೆನಡಾ ಸರ್ಕಾರವು ಸೈಬರ್ ಬೆದರಿಕೆಯೊಡ್ಡುವ ವಿರೋಧಿ ರಾಷ್ಟ್ರಗಳ ಪಟ್ಟಿಗೆ ಭಾರತವನ್ನು ಕಳೆದ ವಾರ ಸೇರಿಸಿದೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ
Upholding the right to practice religion "freely and safely", Canada's Prime Minister Justin Trudeau on Monday called the violence at a Hindu temple near Toronto "unacceptable". Heavy police deployment was seen at the Hindu Sabha temple in Brampton after skirmishes blamed by some leaders on Sikh activists. In videos that went viral, some men were seen breaching the gates of the temple and assaulting devotees inside the complex.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm