ಬ್ರೇಕಿಂಗ್ ನ್ಯೂಸ್
04-11-24 03:28 pm HK News Desk ದೇಶ - ವಿದೇಶ
ಲಕ್ನೋ, ನ.4: ಹೊಟ್ಟೆ ನೋವೆಂದು ವೈದ್ಯರಲ್ಲಿಗೆ ಬಂದಿದ್ದ 15 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಬ್ಲೇಡ್, ಉಗುರು, ವಾಚ್, ಲೋಹದ ಮಾದರಿ ಸೇರಿದಂತೆ 56 ವಸ್ತುಗಳು ಪತ್ತೆಯಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಆದಿತ್ಯ ಹೆಸರಿನ ವಿದ್ಯಾರ್ಥಿ ವೈದ್ಯರು ಸರ್ಜರಿ ನಡೆಸಿದ ಬಳಿಕ ಮೃತಪಟ್ಟಿದ್ದಾನೆ.
ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆತನನ್ನು ಹತ್ರಾಸ್ ಮತ್ತು ಆಬಳಿಕ ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದ ಬಳಿಕವೂ ಬಾಲಕನ ಸ್ಥಿತಿ ಸುಧಾರಿಸಿರಲಿಲ್ಲ. ಆನಂತರ, ಬಾಲಕನ್ನು ಆಲೀಗಢದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಉಸಿರಾಟದ ತೊಂದರೆ ಇದ್ದುದರಿಂದ ಮೂಗಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಉಸಿರಾಟದ ಸಮಸ್ಯೆ ಸರಿಯಾದರೂ, ಹೊಟ್ಟೆ ನೋವು ಕಡಿಮೆಯಾಗಿರಲಿಲ್ಲ.
ಬಳಿಕ ಆಲ್ಟ್ರಾಸೌಂಡ್ ನಡೆಸಿದಾಗ, ಹೊಟ್ಟೆಯಲ್ಲಿ 19 ಲೋಹದ ವಸ್ತುಗಳು ಪತ್ತೆಯಾಗಿದ್ದವು. ಹೀಗಾಗಿ ನೋಯ್ಡಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಶಿಫಾರಸು ಮಾಡಲಾಗಿತ್ತು. ನೋಯ್ಡಾದಲ್ಲಿ ಸ್ಕ್ಯಾನ್ ಮಾಡಿದಾಗ, ಸುಮಾರು 56 ಮಾದರಿಯ ವಸ್ತುಗಳು ಹೊಟ್ಟೆಯಲ್ಲಿ ತುಂಬಿಕೊಂಡಿರುವುದು ಕಂಡುಬಂದಿತ್ತು. ಅಲ್ಲಿನ ವೈದ್ಯರ ಸೂಚನೆಯಂತೆ, ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ದಾಖಲಿಸಿ ಅ.27ರಂದು ಸರ್ಜರಿ ನಡೆಸಲಾಗಿತ್ತು. ಒಂದು ದಿನದ ಬಳಿಕ ಬಾಲಕನ ಎದೆ ಬಡಿತ ಹೆಚ್ಚು ಕಮ್ಮಿ ಆಗಿ ಮೃತಪಟ್ಟಿದ್ದ.
ಇಷ್ಟೊಂದು ಲೋಹದ ವಸ್ತುಗಳು ಬಾಲಕನ ಹೊಟ್ಟೆ ಸೇರಿದ್ದು ಹೇಗೆ ಎನ್ನುವುದು ವೈದ್ಯರು ಮತ್ತು ಹುಡುಗನ ಹೆತ್ತವರಿಗೆ ಅಚ್ಚರಿಯಾಗಿದೆ. ಹುಡುಗ ಬಾಯಿ ಮೂಲಕ ನುಂಗಿದ್ದರೂ, ಶ್ವಾಸಕೋಶಕ್ಕೆ ಪೆಟ್ಟಾಗಬೇಕಿತ್ತು. ಆದರೆ ಕುತ್ತಿಗೆ ಅಥವಾ ಶ್ವಾಸಕೋಶದಲ್ಲಿ ಯಾವುದೇ ಗಾಯದ ಗುರುತು ಕಂಡುಬಂದಿಲ್ಲ ಎಂದು ವೈದ್ಯರು ಹೇಳುತ್ತಾರೆ.
As many as 56 objects, including watch batteries, blades, nails, and other metal particles, were removed from the stomach of a 15-year-old boy in Uttar Pradesh’s Hathras after he complained of stomach pain and difficulty in breathing. However, the boy, a Class 9 student, died during treatment after the surgery.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm