ಬ್ರೇಕಿಂಗ್ ನ್ಯೂಸ್
04-11-24 03:28 pm HK News Desk ದೇಶ - ವಿದೇಶ
ಲಕ್ನೋ, ನ.4: ಹೊಟ್ಟೆ ನೋವೆಂದು ವೈದ್ಯರಲ್ಲಿಗೆ ಬಂದಿದ್ದ 15 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಬ್ಲೇಡ್, ಉಗುರು, ವಾಚ್, ಲೋಹದ ಮಾದರಿ ಸೇರಿದಂತೆ 56 ವಸ್ತುಗಳು ಪತ್ತೆಯಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಆದಿತ್ಯ ಹೆಸರಿನ ವಿದ್ಯಾರ್ಥಿ ವೈದ್ಯರು ಸರ್ಜರಿ ನಡೆಸಿದ ಬಳಿಕ ಮೃತಪಟ್ಟಿದ್ದಾನೆ.
ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆತನನ್ನು ಹತ್ರಾಸ್ ಮತ್ತು ಆಬಳಿಕ ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದ ಬಳಿಕವೂ ಬಾಲಕನ ಸ್ಥಿತಿ ಸುಧಾರಿಸಿರಲಿಲ್ಲ. ಆನಂತರ, ಬಾಲಕನ್ನು ಆಲೀಗಢದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಉಸಿರಾಟದ ತೊಂದರೆ ಇದ್ದುದರಿಂದ ಮೂಗಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಉಸಿರಾಟದ ಸಮಸ್ಯೆ ಸರಿಯಾದರೂ, ಹೊಟ್ಟೆ ನೋವು ಕಡಿಮೆಯಾಗಿರಲಿಲ್ಲ.
ಬಳಿಕ ಆಲ್ಟ್ರಾಸೌಂಡ್ ನಡೆಸಿದಾಗ, ಹೊಟ್ಟೆಯಲ್ಲಿ 19 ಲೋಹದ ವಸ್ತುಗಳು ಪತ್ತೆಯಾಗಿದ್ದವು. ಹೀಗಾಗಿ ನೋಯ್ಡಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಶಿಫಾರಸು ಮಾಡಲಾಗಿತ್ತು. ನೋಯ್ಡಾದಲ್ಲಿ ಸ್ಕ್ಯಾನ್ ಮಾಡಿದಾಗ, ಸುಮಾರು 56 ಮಾದರಿಯ ವಸ್ತುಗಳು ಹೊಟ್ಟೆಯಲ್ಲಿ ತುಂಬಿಕೊಂಡಿರುವುದು ಕಂಡುಬಂದಿತ್ತು. ಅಲ್ಲಿನ ವೈದ್ಯರ ಸೂಚನೆಯಂತೆ, ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ದಾಖಲಿಸಿ ಅ.27ರಂದು ಸರ್ಜರಿ ನಡೆಸಲಾಗಿತ್ತು. ಒಂದು ದಿನದ ಬಳಿಕ ಬಾಲಕನ ಎದೆ ಬಡಿತ ಹೆಚ್ಚು ಕಮ್ಮಿ ಆಗಿ ಮೃತಪಟ್ಟಿದ್ದ.
ಇಷ್ಟೊಂದು ಲೋಹದ ವಸ್ತುಗಳು ಬಾಲಕನ ಹೊಟ್ಟೆ ಸೇರಿದ್ದು ಹೇಗೆ ಎನ್ನುವುದು ವೈದ್ಯರು ಮತ್ತು ಹುಡುಗನ ಹೆತ್ತವರಿಗೆ ಅಚ್ಚರಿಯಾಗಿದೆ. ಹುಡುಗ ಬಾಯಿ ಮೂಲಕ ನುಂಗಿದ್ದರೂ, ಶ್ವಾಸಕೋಶಕ್ಕೆ ಪೆಟ್ಟಾಗಬೇಕಿತ್ತು. ಆದರೆ ಕುತ್ತಿಗೆ ಅಥವಾ ಶ್ವಾಸಕೋಶದಲ್ಲಿ ಯಾವುದೇ ಗಾಯದ ಗುರುತು ಕಂಡುಬಂದಿಲ್ಲ ಎಂದು ವೈದ್ಯರು ಹೇಳುತ್ತಾರೆ.
As many as 56 objects, including watch batteries, blades, nails, and other metal particles, were removed from the stomach of a 15-year-old boy in Uttar Pradesh’s Hathras after he complained of stomach pain and difficulty in breathing. However, the boy, a Class 9 student, died during treatment after the surgery.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm