ಬ್ರೇಕಿಂಗ್ ನ್ಯೂಸ್
08-08-20 12:08 pm Headline Karnataka News Network ದೇಶ - ವಿದೇಶ
ಜೊಹಾನ್ಸ್ಬರ್ಗ್: ಜಪಾನ್ನ ಎಂ.ವಿ.ವಕಾಶಿಯೊ ಎಂಬ ಹೆಸರಿನ ಹಡಗಿನಿಂದ ಇಂಧನ ಸೋರಿಕೆಯಾಗಿರುವುದು ತಿಳಿಯುತ್ತಿದ್ದಂತೆ ಮಾರಿಷಸ್ ಸರ್ಕಾರವು ಶುಕ್ರವಾರ ಪರಿಸರ ತುರ್ತು ಪರಿಸ್ಥಿತಿ ಘೋಷಿಸಿದೆ.
ಇತ್ತೀಚೆಗೆ ತನ್ನ ಆಗ್ನೇಯ ಕರಾವಳಿ ಮೂಲಕ ಸಾಗಿರುವ ವಕಾಶಿಯೊ ಹಡಗಿನಲ್ಲಿ ಸುಮಾರು 4,000 ಟನ್ಗಳಷ್ಟು ಇಂಧನವಿತ್ತು. ನಮ್ಮ ಪರಿಸರ ಪ್ರದೇಶದ ಸಮೀಪದಲ್ಲೇ ಇಂಧನ ಸೋರಿಕೆಯಾಗಿರುವುದು ಉಪಗ್ರಹ ಚಿತ್ರಗಳಿಂದ ಸ್ಪಷ್ಟವಾಗಿದೆ’ ಎಂದು ಮಾರಿಷಸ್ ಸರ್ಕಾರ ತಿಳಿಸಿದೆ.
ನೀರಿನಲ್ಲಿ ಅಪಾರ ಪ್ರಮಾಣದ ಇಂಧನ ಬೆರೆತಿದೆ. ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂಬುದೇ ನಮಗೆ ತೋಚುತ್ತಿಲ್ಲ. ಹೀಗಾಗಿ ಫ್ರಾನ್ಸ್ ಸರ್ಕಾರದ ನೆರವು ಕೋರಿದ್ದೇವೆ. ಆ ದೇಶದ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್ ಅವರಿಗೂ ಮನವಿ ಮಾಡಿದ್ದೇವೆ’ ಎಂದು ಮಾರಿಷಸ್ನ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ತಿಳಿಸಿದ್ದಾರೆ.
ಇಂಧನ ಸೋರಿಕೆಯಿಂದ ಬ್ಲೂ ಬೇ ಮರಿನ್ ಪಾರ್ಕ್ ಹಾಗೂ ಇತರ ಪ್ರದೇಶಗಳ ನೀರು ರಾಸಾಯನಿಕಯುಕ್ತವಾಗಿದೆ. ನಾವೀಗ ಪರಿಸರ ಬಿಕ್ಕಟ್ಟು ಎದುರಿಸುತ್ತಿದ್ದೇವೆ’ ಎಂದು ಮಾರಿಷಸ್ನ ಪರಿಸರ ಸಚಿವ ಕ್ಯಾವಿ ರಮಣೊ ಹೇಳಿದ್ದಾರೆ.
ಈ ಹಡಗು ಜಪಾನ್ನ ಒಕಿಯೊ ಮಾರಿಟೈಮ್ ಕಾರ್ಪೊರೇಷನ್ ಆ್ಯಂಡ್ ನಾಗಸಾಕಿ ಶಿಪ್ಪಿಂಗ್ ಕಂಪನಿ ಲಿಮಿಟೆಡ್ಗೆ ಸೇರಿದ್ದಾಗಿದೆ. ಈ ಕಂಪನಿಯ ವಿರುದ್ಧ ನಿರ್ಲಕ್ಷ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಡಗು ಜುಲೈ 25ರಂದು ನಮ್ಮ ಆಗ್ನೇಯ ಕರಾವಳಿ ಭಾಗದಲ್ಲಿ ಸಂಚರಿಸಿದೆ’ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಡಗಿನಿಂದ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಮತ್ತು ತೈಲ ಸೋರಿಕೆಯಾಗಿದ್ದು ಅದು ನೀರಿನಲ್ಲೂ ಬೆರೆತಿದೆ. ಇದರಿಂದ ಜೀವ ಸಂಕುಲಕ್ಕೆ ಅಪಾಯ ಎದುರಾಗಿದೆ. ಮಾರಿಷಸ್ನ ಆರ್ಥಿಕತೆ ಹಾಗೂ ಆಹಾರ ಭದ್ರತೆಯ ಮೇಲೆ ಇದು ಭೀಕರ ಪರಿಣಾಮ ಉಂಟುಮಾಡಲಿದೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ’ ಎಂದು ಗ್ರೀನ್ಪೀಸ್ ಆಫ್ರಿಕಾ ಸಂಸ್ಥೆಯ ಮ್ಯಾನೇಜರ್ (ಕ್ಲೈಮೇಟ್ ಆ್ಯಂಡ್ ಎನರ್ಜಿ) ಹ್ಯಾಪಿ ಖಾಂಬುಲೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm