ಬ್ರೇಕಿಂಗ್ ನ್ಯೂಸ್
08-08-20 12:08 pm Headline Karnataka News Network ದೇಶ - ವಿದೇಶ
ಜೊಹಾನ್ಸ್ಬರ್ಗ್: ಜಪಾನ್ನ ಎಂ.ವಿ.ವಕಾಶಿಯೊ ಎಂಬ ಹೆಸರಿನ ಹಡಗಿನಿಂದ ಇಂಧನ ಸೋರಿಕೆಯಾಗಿರುವುದು ತಿಳಿಯುತ್ತಿದ್ದಂತೆ ಮಾರಿಷಸ್ ಸರ್ಕಾರವು ಶುಕ್ರವಾರ ಪರಿಸರ ತುರ್ತು ಪರಿಸ್ಥಿತಿ ಘೋಷಿಸಿದೆ.
ಇತ್ತೀಚೆಗೆ ತನ್ನ ಆಗ್ನೇಯ ಕರಾವಳಿ ಮೂಲಕ ಸಾಗಿರುವ ವಕಾಶಿಯೊ ಹಡಗಿನಲ್ಲಿ ಸುಮಾರು 4,000 ಟನ್ಗಳಷ್ಟು ಇಂಧನವಿತ್ತು. ನಮ್ಮ ಪರಿಸರ ಪ್ರದೇಶದ ಸಮೀಪದಲ್ಲೇ ಇಂಧನ ಸೋರಿಕೆಯಾಗಿರುವುದು ಉಪಗ್ರಹ ಚಿತ್ರಗಳಿಂದ ಸ್ಪಷ್ಟವಾಗಿದೆ’ ಎಂದು ಮಾರಿಷಸ್ ಸರ್ಕಾರ ತಿಳಿಸಿದೆ.
ನೀರಿನಲ್ಲಿ ಅಪಾರ ಪ್ರಮಾಣದ ಇಂಧನ ಬೆರೆತಿದೆ. ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂಬುದೇ ನಮಗೆ ತೋಚುತ್ತಿಲ್ಲ. ಹೀಗಾಗಿ ಫ್ರಾನ್ಸ್ ಸರ್ಕಾರದ ನೆರವು ಕೋರಿದ್ದೇವೆ. ಆ ದೇಶದ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್ ಅವರಿಗೂ ಮನವಿ ಮಾಡಿದ್ದೇವೆ’ ಎಂದು ಮಾರಿಷಸ್ನ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ತಿಳಿಸಿದ್ದಾರೆ.
ಇಂಧನ ಸೋರಿಕೆಯಿಂದ ಬ್ಲೂ ಬೇ ಮರಿನ್ ಪಾರ್ಕ್ ಹಾಗೂ ಇತರ ಪ್ರದೇಶಗಳ ನೀರು ರಾಸಾಯನಿಕಯುಕ್ತವಾಗಿದೆ. ನಾವೀಗ ಪರಿಸರ ಬಿಕ್ಕಟ್ಟು ಎದುರಿಸುತ್ತಿದ್ದೇವೆ’ ಎಂದು ಮಾರಿಷಸ್ನ ಪರಿಸರ ಸಚಿವ ಕ್ಯಾವಿ ರಮಣೊ ಹೇಳಿದ್ದಾರೆ.
ಈ ಹಡಗು ಜಪಾನ್ನ ಒಕಿಯೊ ಮಾರಿಟೈಮ್ ಕಾರ್ಪೊರೇಷನ್ ಆ್ಯಂಡ್ ನಾಗಸಾಕಿ ಶಿಪ್ಪಿಂಗ್ ಕಂಪನಿ ಲಿಮಿಟೆಡ್ಗೆ ಸೇರಿದ್ದಾಗಿದೆ. ಈ ಕಂಪನಿಯ ವಿರುದ್ಧ ನಿರ್ಲಕ್ಷ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಡಗು ಜುಲೈ 25ರಂದು ನಮ್ಮ ಆಗ್ನೇಯ ಕರಾವಳಿ ಭಾಗದಲ್ಲಿ ಸಂಚರಿಸಿದೆ’ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಡಗಿನಿಂದ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಮತ್ತು ತೈಲ ಸೋರಿಕೆಯಾಗಿದ್ದು ಅದು ನೀರಿನಲ್ಲೂ ಬೆರೆತಿದೆ. ಇದರಿಂದ ಜೀವ ಸಂಕುಲಕ್ಕೆ ಅಪಾಯ ಎದುರಾಗಿದೆ. ಮಾರಿಷಸ್ನ ಆರ್ಥಿಕತೆ ಹಾಗೂ ಆಹಾರ ಭದ್ರತೆಯ ಮೇಲೆ ಇದು ಭೀಕರ ಪರಿಣಾಮ ಉಂಟುಮಾಡಲಿದೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ’ ಎಂದು ಗ್ರೀನ್ಪೀಸ್ ಆಫ್ರಿಕಾ ಸಂಸ್ಥೆಯ ಮ್ಯಾನೇಜರ್ (ಕ್ಲೈಮೇಟ್ ಆ್ಯಂಡ್ ಎನರ್ಜಿ) ಹ್ಯಾಪಿ ಖಾಂಬುಲೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm