ಬ್ರೇಕಿಂಗ್ ನ್ಯೂಸ್
27-11-24 12:36 pm HK News Desk ದೇಶ - ವಿದೇಶ
ತ್ರಿಶ್ಶೂರ್, ನ.27: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಮಲಗಿದ್ದ ಅಲೆಮಾರಿಗಳ ಮೇಲೆ ಚಲಿಸಿದ ಪರಿಣಾಮ ಇಬ್ಬರು ಮಕ್ಕಳ ಸಹಿತ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಎಂಬಲ್ಲಿ ನಡೆದಿದೆ.
ಕಣ್ಣೂರಿನಿಂದ ಎರ್ನಾಕುಲಂ ಕಡೆಗೆ ತೆರಳುತ್ತಿದ್ದ ಲಾರಿ ನಸುಕಿನಲ್ಲಿ ರಸ್ತೆ ಬದಿ ಮಲಗಿದ್ದ ಅಲೆಮಾರಿ ಕುಟುಂಬಸ್ಥರ ಮೇಲೆ ನುಗ್ಗಿದೆ. ಘಟನೆಯಲ್ಲಿ ಕಾಳಿಯಪ್ಪನ್(50), ನಾಗಮ್ಮ(39), ಬಂಗಾಯಿ(28), ಜೀವನ್ (4) ಮತ್ತು ಇನ್ನೊಂದು ಮಗು ಮೃತಪಟ್ಟಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಡೈವರ್ಶನ್ ಬೋರ್ಡ್ ಕಾಣಿಸದೆ ಲಾರಿ ಚಾಲಕ ನೇರವಾಗಿ ನುಗ್ಗಿಸಿದ್ದಾನೆ. ಚಾಲಕ ಮತ್ತು ಕ್ಲೀನರ್ ಮದ್ಯ ಸೇವಿಸಿದ್ದು, ಘಟನೆ ಸಂದರ್ಭದಲ್ಲಿ ಕ್ಲೀನರ್ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಂಬರ್ ಲಾರಿ ಚಾಲಕ ಕಣ್ಣೂರು ಆಲಂಗೋಡ್ ನಿವಾಸಿ ಜೋಸ್ (54) ಮತ್ತು ಕ್ಲೀನರ್ ಅಲೆಕ್ಸ್ (35) ಅವರನ್ನು ಬಂಧಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಯಾಣದುದ್ದಕ್ಕೂ ಮದ್ಯ ಸೇವಿಸುತ್ತ ಬಂದಿದ್ದರು. ಅತಿಯಾದ ಮದ್ಯ ಸೇವನೆ ತಪಾಸಣೆ ವೇಳೆ ಪತ್ತೆಯಾಗಿದೆ. ಇದಕ್ಕಾಗಿ ಇವರ ಮೇಲೆ ಉದ್ದೇಶಪೂರ್ವಕ ಕೊಲೆ ಎನ್ನುವ ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. ಪೊನ್ನಾನಿಯಿಂದ ಕ್ಲೀನರ್ ಅಲೆಕ್ಸ್ ಲಾರಿ ಚಲಾಯಿಸಿದ್ದು, ಆತನಲ್ಲಿ ಡ್ರೈವಿಂಗ್ ಲೈಸನ್ಸ್ ಇಲ್ಲ. ಡಿವೈಡರ್ ಮತ್ತು ಬ್ಯಾರಿಕೇಡ್ ನೋಡದೆ ಲಾರಿ ಚಲಾಯಿಸಿದ್ದು, 50 ಮೀಟರ್ ಮುನ್ನುಗ್ಗಿ ಬಂದ ಮೇಲೆ ರಸ್ತೆ ಬದಿ ಮಲಗಿದ್ದವರ ಮೇಲೆ ಹಾಯಿಸಿದ್ದಾನೆ. ಸಾರಿಗೆ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
In a tragic incident at Nattika in Thrissur district, a lorry carrying timber lost control and rammed into a group of people who were sleeping, killing five of them, including two children. The accident took place around 4 a.m. on Tuesday (November 26, 2024).
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm