ಬ್ರೇಕಿಂಗ್ ನ್ಯೂಸ್
02-12-24 10:44 pm HK News Desk ದೇಶ - ವಿದೇಶ
ಚೆನ್ನೈ, ಡಿ.2: ತಮಿಳುನಾಡು ರಾಜ್ಯದಾದ್ಯಂತ ಫೆಂಗಾಲ್ ಚಂಡಮಾರುತ ಹಾವಳಿ ಎಬ್ಬಿಸಿದೆ. ಪುದುಚೇರಿ ಸೇರಿದಂತೆ ಉತ್ತರ ತಮಿಳುನಾಡಿನ ತಿರುವಣ್ಣಾಮಲೈ, ಕೃಷ್ಣಗಿರಿ, ಧರ್ಮಾಪುರಿ, ವಿಲ್ಲುಪುರಂ ಜಿಲ್ಲೆಗಳಲ್ಲಿ ಹೆಚ್ಚು ಪೀಡನೆ ಮಾಡಿದೆ. 14 ಜಿಲ್ಲೆಗಳಲ್ಲಿ ಒಂದೂವರೆ ಕೋಟಿ ಜನರು ಚಂಡಮಾರುತದಿಂದ ಬೆಳೆ, ಆಸ್ತಿ ನಷ್ಟ ಅನುಭವಿಸಿದ್ದಾರೆ. 2.11 ಲಕ್ಷ ಹೆಕ್ಟೇರ್ ಕೃಷಿ ಹಾನಿಯಾಗಿದೆ ಎಂದು ಸಿಎಂ ಎಂ.ಕೆ ಸ್ಟಾಲಿನ್ ತಿಳಿಸಿದ್ದಾರೆ.
ಅಣ್ಣಾಮಲೈಯಾರ್ ಬೆಟ್ಟ ಪ್ರದೇಶದಲ್ಲಿ ಮಗು ಸೇರಿದಂತೆ ಐದು ಜನರು ಸಾವು ಕಂಡಿದ್ದಾರೆ. ಡಿ.1ರಂದು ಕೃಷ್ಣಗಿರಿಯಲ್ಲಿ 50 ಸೆಂಟಿ ಮೀಟರ್, ವಿಲ್ಲುಪುರಂನಲ್ಲಿ 42 ಸೆ.ಮೀ. ಮಳೆಯಾಗಿದೆ. ಇದೇ ವೇಳೆ. ಡಿ.2ರಂದು ಉತ್ತರ ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಮಲ್ಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಡಿ.2ರಂದು ಉತ್ತರ ಕೇರಳ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ನಾಶ- ನಷ್ಟ ಉಂಟಾಗಿದೆ.



![]()
![]()


ಪುದುಚೇರಿಯಲ್ಲಿ ಕಳೆದ 30 ವರ್ಷಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಪ್ರವಾಹದ ಸ್ಥಿತಿ ತಲೆದೋರಿದ್ದು, ಸಂಕಷ್ಟಕ್ಕೀಡಾದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಡಿ.1ರ ಸಂಜೆಯ ಬಳಿಕ ಪುದುಚೇರಿ ಏರ್ಪೋರ್ಟ್ ಬಂದ್ ಮಾಡಲಾಗಿತ್ತು. ಹವಾಮಾನ ತಜ್ಞರ ಪ್ರಕಾರ, ಈ ಬಾರಿಯ ಚಂಡಮಾರುತ ಅತಿ ನಿಧಾನಗತಿಯಿಂದ ಕೂಡಿದೆಯಂತೆ. ನವೆಂಬರ್, ಡಿಸೆಂಬರ್ ನಲ್ಲಿ ಬರುತ್ತಿದ್ದ ಸೈಕ್ಲೋನ್ ಇಷ್ಟು ನಿಧಾನಗತಿಯಲ್ಲಿ ಬಂದಿದ್ದು ಈ ಹಿಂದೆ ಕಂಡಿಲ್ಲ. 24 ಗಂಟೆಯಲ್ಲಿ ಕೇವಲ 500 ಕಿಮೀ ಅಷ್ಟೇ ಸಂಚರಿಸಿದ್ದರಿಂದ ಇದರ ಹಾವಳಿ ಹೆಚ್ಚಿದೆ. ಗಂಟೆಗೆ ಕೇವಲ 15 ಕಿಮೀ ಅಷ್ಟೇ ಸೈಕ್ಲೋನ್ ಸಂಚರಿಸುತ್ತಿರುವುದರಿಂದ ಮಳೆಯೂ ಹೆಚ್ಚು ಬೀಳುತ್ತಿದೆ ಎಂದು ತಿಳಿಸಿದ್ದಾರೆ.
ಡಿ.2ರಂದು ಚಂಡಮಾರುತ ಕರ್ನಾಟಕ ಪ್ರವೇಶ ಮಾಡಿದ್ದು, ಉತ್ತರ ಕೇರಳದ ಮೂಲಕ ಕರ್ನಾಟಕ ಕರಾವಳಿಯಿಂದಾಗಿ ಗೋವಾಕ್ಕೆ ತಲುಪುವ ಸಾಧ್ಯತೆಯಿದೆ. ಹೀಗಾಗಿ ಡಿ.2 ಮತ್ತು 3ರಂದು ಭಾರೀ ಮಳೆಯಾಗುವ ಬಗ್ಗೆ ಸೂಚನೆ ನೀಡಲಾಗಿದೆ.
Cyclone Fengal has progressed towards Tamil Nadu and made landfall on the Puducherry coasts at 7pm on Saturday. It is now likely to remain in Tamil Nadu, and weaken into a deep depression. Budget carrier IndiGo announced that it is resuming operations. The cylcone triggered heavy rainfall, shutting down airport operations till 4am on December 1.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm