ಬ್ರೇಕಿಂಗ್ ನ್ಯೂಸ್
24-12-24 09:17 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಂದಿರ - ಮಸೀದಿ ನಡುವೆ ವಿವಾದ ಎಬ್ಬಿಸಬೇಡಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ಅಖಿಲ ಭಾರತ ಸಂತ ಸಮಿತಿಯ ಸ್ವಾಮೀಜಿಗಳು ತೀವ್ರ ಆಕ್ಷೇಪ ಎತ್ತಿದ್ದಾರೆ. ಮೋಹನ್ ಭಾಗವತ್ ಸಂಘವನ್ನು ನಡೆಸ್ತಾರೆ ಹೊರತು ಹಿಂದೂ ಧರ್ಮವನ್ನಲ್ಲ ಎಂದು ಕಿಡಿಕಾರಿದ್ದಾರೆ. ಧರ್ಮಕ್ಕೆ ಸಂಬಂಧಿಸಿದ ವಿಚಾರಗಳನ್ನು ಸಂಘಕ್ಕಿಂತ ನಾವು ನಿರ್ಧರಿಸುತ್ತೇವೆ ಎಂದು ಸ್ವಾಮೀಜಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಮಾತನಾಡಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ನಿರ್ಮಾಣದ ಬಳಿಕ ಮಂದಿರ ಮಸೀದಿ ವಿವಾದ ಸೃಷ್ಟಿಸಿ ಕೆಲವರು ನಾಯಕರಾಗಲು ಹೋಗುತ್ತಿದ್ದಾರೆ. ಇದನ್ನೆಲ್ಲಾ ಒಪ್ಪಲು ಆಗುತ್ತಾ? ಇದು ಮುಂದುವರಿಯಬಾರದು. ನಮ್ಮ ದೇಶ ಸಾಮರಸ್ಯದಿಂದ ಕೂಡಿದೆ ಎಂಬುದನ್ನು ವಿಶ್ವಕ್ಕೆ ಸಾರಬೇಕು ಎಂದಿದ್ದರು.

ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರನಾಥ್ ಸರಸ್ವತಿ ಅವರು, ಧರ್ಮದ ವಿಚಾರದಲ್ಲಿ ಧಾರ್ಮಿಕ ಗುರುಗಳು ನಿರ್ಧರಿಸುತ್ತಾರೆ. ಅವರು ಏನು ತೀರ್ಮಾನ ಮಾಡ್ತಾರೆ ಅದನ್ನು ಸಂಘ ಮತ್ತು ವಿಎಚ್ಪಿ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಮತ್ತೊಬ್ಬ ಸ್ವಾಮೀಜಿ ಜಗದ್ಗುರು ರಾಮಭದ್ರಾಚಾರ್ಯ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಸವಾಲು ಹಾಕಿದ್ದು, ಮೋಹನ್ ಭಾಗವತ್ ನಮ್ಮ ಶಿಸ್ತುಪಾಲಕ ಅಲ್ಲ. ನಾವು ಹಿಂದೂಗಳ ಶಿಸ್ತುಪಾಲಕರು ಎಂದು ಹೇಳಿದ್ದಾರೆ. ಮೋಹನ್ ಭಾಗವತ್ ಏನು ಹೇಳಿದ್ದಾರೋ ಅದು ಅವರ ವೈಯಕ್ತಿಕ ಅಭಿಪ್ರಾಯ, ಅದಕ್ಕೂ ನಮಗೂ ಸಂಬಂಧ ಇಲ್ಲ. ಅವರು ಸಂಘವನ್ನು ಮುನ್ನಡೆಸುತ್ತಿದ್ದಾರೆ, ಅವರು ಹಿಂದೂ ಧರ್ಮವನ್ನು ಪ್ರತಿನಿಧಿಸುತ್ತಿಲ್ಲ ಎನ್ನುವ ಮೂಲಕ ನೇರ ಟಾಂಗ್ ನೀಡಿದ್ದಾರೆ.
ಸತ್ಯದ ಕಡೆ ನಮ್ಮ ಗಮನ ಇರಲಿದೆ. ಎಲ್ಲಿ ಪುರಾತನ ಹಿಂದೂ ದೇಗುಲಗಳು ಸಿಗುತ್ತವೋ ಅವುಗಳನ್ನು ಪುನರ್ ಪ್ರತಿಷ್ಠಾಪಿಸುವುದು ನಮ್ಮ ಜವಾಬ್ದಾರಿ. ಅದನ್ನು ನಾವು ಮಾಡೇ ಮಾಡ್ತೀವಿ. ಇದೇನು ಹೊಸ ಚಿಂತನೆಯಲ್ಲ, ಸಾಂಸ್ಕೃತಿಕ ಹಾಗೂ ಧಾರ್ಮಿಕ ರಕ್ಷಣೆಯ ಭಾಗವಾಗಿ ಈ ಕೆಲಸವನ್ನು ನಾವು ಮಾಡುತ್ತೇವೆ ಎಂದಿದ್ದಾರೆ.
Attacking the BJP-RSS claiming that its “duplicity knows no boundaries”, Congress on Tuesday alleged that RSS chief Mohan Bhagwat will project a soft image by talking against Hindutva activists seeking temples behind mosques while others do the opposite.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm