ಬ್ರೇಕಿಂಗ್ ನ್ಯೂಸ್
02-01-25 12:02 pm HK News Desk ದೇಶ - ವಿದೇಶ
ಅಮೆರಿಕ, ಜ 02: ಇಲ್ಲಿನ ಬೌರ್ಬನ್ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮದಲ್ಲಿದ್ದ ಜನರ ಗುಂಪಿನ ಮೇಲೆ ಟ್ರಕ್ ಹರಿದು 15 ಜನ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜನರ ಮೇಲೆ ನುಗ್ಗಿದ ವಾಹನದ ಮೇಲೆ ಇಸ್ಲಾಮಿಕ್ ಸ್ಟೇಟ್(ಐಎಸ್) ಭಯೋತ್ಪಾದಕ ಸಂಘಟನೆಯ ಧ್ವಜ ಕಂಡುಬಂದಿದ್ದು, ಎಫ್ಬಿಐ ತನಿಖೆ ಚುರುಕುಗೊಳಿಸಿದೆ. ಘಟನೆಯ ಹಿಂದೆ ಯಾವುದಾದರೂ ಭಯೋತ್ಪಾದಕ ಗುಂಪಿನ ಕೈವಾಡವಿದೆಯೇ ಎಂಬ ಕುರಿತು ತನಿಖೆ ತೀವ್ರಗೊಳಿಸಿದೆ.
ಇದುವರೆಗೂ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ. ಸುಧಾರಿತ ಸಾಧನ, ಕಂಟ್ರಿ ಬಾಂಬ್ಗಳು ವಾಹನದಲ್ಲಿ ಪತ್ತೆಯಾಗಿವೆ. ವಾಹನದಲ್ಲಿ ಚಾಲಕ ಮಾತ್ರ ಇದ್ದ ಎಂದು FBI ಮಾಹಿತಿ ನೀಡಿದೆ.
ಫ್ರೆಂಚ್ ಕ್ವಾರ್ಟನ್ನ ಆರ್ಲಿನ್ಸ್ನ ಐತಿಹಾಸಿಕ ಕೇಂದ್ರದ ಸಮೀಪ ಹೊಸ ವರ್ಷ 2025ರ ಸಂಭ್ರಮಾಚರಣೆಯಲ್ಲಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 3 ಗಂಟೆಗೆ ಘಟನೆ ನಡೆದಿದೆ. ಓಪನ್ ಏರ್ ಕನ್ಸರ್ಟ್ನಲ್ಲಿ ಸೇರಿದ್ದ ಜನರ ಮೇಲೆ ವಾಹನ ಹರಿದಿದೆ. 'ಆಲ್ಸ್ಟೇಟ್ ಶುಗರ್ ಬೌಲ್'ಗಾಗಿ ನಗರಕ್ಕೆ ಬರುತ್ತಿದ್ದ ಕಾಲೇಜು ಫುಟ್ಬಾಲ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಶುಗರ್ ಬೌಲ್ ಅಮೆರಿಕದೆಲ್ಲೆಡೆ ನಡೆಯುವ ವಾರ್ಷಿಕ ಕಾಲೇಜು ಫುಟ್ಬಾಲ್ ಆಟವಾಗಿದೆ.
ಆರ್ಲೆನ್ಸ್ ಪೊಲೀಸ್ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ, "ಸಂಭ್ರಮಾಚಾರಣೆಗಾಗಿ ನಾವು ಶೇ 100ರಷ್ಟು ಸಿಬ್ಬಂದಿಗಳನ್ನು ನಿಯೋಜಿಸಿದ್ದೆವು. ಇನ್ನೂ ಹೆಚ್ಚುವರಿಯಾಗಿ 300ಕ್ಕೂ ಹೆಚ್ಚು ಅಧಿಕಾರಿಗಳನ್ನು ಕಾನೂನು ಜಾರಿ ಸಂಸ್ಥೆಯಿಂದ ಎರವಲು ಪಡೆದಿದ್ದೆವು" ಎಂದು ತಿಳಿಸಿರುವುದಾಗಿ ಸಿಎನ್ಎನ್ ವರದಿ ಮಾಡಿದೆ.
ನಗರದೆಲ್ಲೆಡೆ ಸ್ಥಳೀಯ, ರಾಜ್ಯ ಮತ್ತು ಫೆಡರಲ್ ಸಹಭಾಗಿತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಪೊಲೀಸ್ ವಾಹನಗಳ ಜೊತೆಗೆ ಕಾಲ್ನಡಿಗೆ, ಬೈಕ್ ಹಾಗೂ ಕುದುರೆಗಳ ಮೇಲೆಯೂ ಕೂಡ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ನಡುವೆಯೂ ಘಟನೆ ಸಂಭವಿಸಿದೆ.
'ಎಕ್ಸ್' ಜಾಲತಾಣದ ಮೂಲಕ ಸಾರ್ವಜನಿಕರಿಗೆ ನ್ಯೂ ಆರ್ಲಿನ್ ತುರ್ತು ಸಿದ್ಧತಾ ಪ್ರಚಾರ(ಎನ್ಒಎಲ್ಎ) ಸಂದೇಶ ರವಾನಿಸಿ, "ಕ್ಯಾನೆಲ್ ಮತ್ತು ಬೌರ್ಬನ್ ಸ್ಟ್ರೀಟ್ನಲ್ಲಿ ಸಾಮೂಹಿಕ ಅಪಾಯದ ಘಟನೆ ಸಂಭವಿಸಿದೆ. ಈ ಪ್ರದೇಶದಿಂದ ದೂರವಿರಿ" ಎಂದು ಎಚ್ಚರಿಸಿದೆ.
Authorities are looking for any connections, associations or co-conspirators who might be linked to the man who intentionally drove a pickup truck into a crowd of New Year’s revelers in the Bourbon Street area of New Orleans early Wednesday, President Joe Biden said late Wednesday evening.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm