ಬ್ರೇಕಿಂಗ್ ನ್ಯೂಸ್
15-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15: ಈ ದೇಶದಲ್ಲಿ ಬಿಜೆಪಿಯೇ ನಿಜವಾದ ತುಕ್ಡೇ ತುಕ್ಡೇ ಗ್ಯಾಂಗ್. ಪಂಜಾಬಿನಲ್ಲಿ ರೈತರ ಪ್ರತಿಭಟನೆ ಮುಂದಿಟ್ಟು ಹಿಂದುಗಳನ್ನು ಸಿಖ್ಖರ ವಿರುದ್ಧ ಎತ್ತಿಕಟ್ಟುತ್ತಿದೆ. ಸೌಹಾರ್ದತೆ ನೆಲೆಸಿದ್ದ ನಾಡಿನಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂದು ಶಿರೋಮಣಿ ಅಕಾಲಿದಳ್ ಘಟಕದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಆರೋಪಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಾದಲ್ ಈ ರೀತಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಹಿಂದು- ಮುಸ್ಲಿಮರನ್ನು ಒಡೆಯುವಂತೆ ಮಾಡಿದ್ರು. ಈಗ ಶಾಂತಿ ನೆಲೆಸಿದ್ದ ಪಂಜಾಬಿನಲ್ಲಿ ಹಿಂದುಗಳನ್ನು ಎತ್ತಿಕಟ್ಟುತ್ತಿದ್ದಾರೆ. ಹಿಂಸೆಗೆ ದೂಡುತ್ತಿದ್ದಾರೆ. ಎನ್ ಡಿಎ ಸರಕಾರ ರಾಜ್ಯಗಳ ಅಧಿಕಾರವನ್ನು ಬದಿಗೊತ್ತಿ ಕೃಷಿ ಕಾನೂನುಗಳನ್ನು ಹೇರುತ್ತಿದೆ. ಅಕಾಲಿ ದಳ ಹಿಂದೆ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಮಾತನಾಡಿದಾಗ ನಮ್ಮನ್ನು ಪ್ರತ್ಯೇಕತಾವಾದಿಗಳು ಎಂದಿದ್ದರು. ಈಗ ಎಲ್ಲರೂ ಈ ಬಗ್ಗೆ ದನಿ ಎತ್ತುತ್ತಿದ್ದಾರೆ. ವಿಕೇಂದ್ರೀಕರಣವೇ ಸರಿ ಎನ್ನುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಈಗಿನ ಸ್ಥಿತಿ ಹೇಗಿದೆ ಎಂದ್ರೆ ಕೇಂದ್ರ ಸರಕಾರವನ್ನು ಒಪ್ಪಿದವರು ಮಾತ್ರ ದೇಶಭಕ್ತರು. ವಿರೋಧಿಸಿದರೆ ಅವರೆಲ್ಲ ದೇಶ ವಿರೋಧಿಗಳು ಅನ್ನುವ ಸ್ಥಿತಿ ಇದೆ. ಕೇಂದ್ರ ಸರಕಾರದ ಕೃಷಿ ನೀತಿ ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಪದ್ಮ ಪ್ರಶಸ್ತಿ ನಿರಾಕರಿಸಿದ್ದು, ಕೇಂದ್ರ ಸಚಿವ ಸ್ಥಾನಕ್ಕೆ ಹರ್ ಸಿಮ್ರತ್ ಕೌರ್ ಬಾದಲ್ ರಾಜಿನಾಮೆ ನೀಡಿದ್ದೆಲ್ಲ ದೇಶದ್ರೋಹಿ ಚಟುವಟಿಕೆ ಎನ್ನುವಂತಾಗಿದೆ. ಈಗಿನ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂದು- ಸಿಕ್ಖರ ನಡುವಿನ ಸಂಘರ್ಷ ಎನ್ನುವಂತೆ ಬಿಂಬಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm