ಬ್ರೇಕಿಂಗ್ ನ್ಯೂಸ್
16-12-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಡಿ.16: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ಬಂಧಿತರಾಗಿದ್ದ 36 ಮಂದಿ ವಿದೇಶಿ ತಬ್ಲಿಘಿ ಸದಸ್ಯರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿ ಬಿಡುಗಡೆ ಮಾಡಿದೆ.
14 ವಿವಿಧ ದೇಶಗಳ ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯರು ದೆಹಲಿಯಲ್ಲಿ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ತಬ್ಲಿಘಿಗಳನ್ನು ಬಂಧಿಸಿದ್ದ ದೆಹಲಿ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು. ವೀಸಾ ಅವಧಿ ಮುಗಿದರೂ ದೇಶದಲ್ಲಿ ಉಳಿದುಕೊಂಡಿದ್ದು, ಕೊರೊನಾ ಸೋಂಕು ಹರಡಲು ಕಾರಣವಾಗುವಂತೆ ವರ್ತಿಸಿದ್ದು , ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದು ಹೀಗೆ ವಿವಿಧ ಆರೋಪದಡಿ ಕೇಸು ದಾಖಲಿಸಲಾಗಿತ್ತು. ಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂಬತ್ತು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
36 ಮಂದಿ ಅಲ್ಲದೆ ಇತರೇ ಆರು ದೇಶಗಳಿಂದ ಬಂದಿದ್ದ ಎಂಟು ಮಂದಿಯನ್ನು ಕೂಡ ಕೋರ್ಟ್ ಬಿಡುಗಡೆ ಮಾಡಿದೆ. ಯಾವುದೇ ದಾಖಲೆ ಪತ್ರಗಳಿಲ್ಲದೇ ದೇಶದಲ್ಲಿ ಉಳಿದುಕೊಂಡ ಆರೋಪವನ್ನು ಅವರ ಮೇಲೆ ವಿಧಿಸಲಾಗಿತ್ತು. ಕೋರ್ಟ್ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶ ನೀಡಿದೆ.
ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಏರಿಯಾದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Observing that the prosecution failed to “prove the presence of accused inside the Markaz premises” and noting “contradictions” in statements by its witnesses, a Delhi court Tuesday acquitted 36 foreigners facing trial for allegedly flouting Covid guidelines while participating in a Tablighi Jamaat event in Nizamuddin in March that was later linked to infections in 14 states.
19-03-25 11:39 am
Bangalore Correspondent
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am