ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.
ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm