ಬ್ರೇಕಿಂಗ್ ನ್ಯೂಸ್
01-02-25 09:35 pm HK News Desk ದೇಶ - ವಿದೇಶ
ಕೊಚ್ಚಿ, ಫೆ.1: ಏಂಟಿ ಟೆರರಿಸ್ಟ್ ಸ್ಕ್ವಾಡ್ ನಡೆಸಿದ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ 27 ಬಾಂಗ್ಲಾದೇಶಿ ನಿವಾಸಿಗಳನ್ನು ಎರ್ನಾಕುಲಂ ಜಿಲ್ಲೆಯ ಉತ್ತರ ಪರವೂರು ಎಂಬಲ್ಲಿಂದ ವಶಕ್ಕೆ ಪಡೆಯಲಾಗಿದೆ. ಒಂದೇ ಬಾರಿಗೆ ಇಷ್ಟೊಂದು ಅಕ್ರಮ ಬಾಂಗ್ಲಾನ್ನರನ್ನು ಜಿಲ್ಲೆಯೊಂದರಲ್ಲಿ ಪತ್ತೆ ಮಾಡಿದ್ದು ಇದೇ ಮೊದಲು ಎನ್ನಲಾಗಿದೆ.
ಎರ್ನಾಕುಲಂ ಗ್ರಾಮಾಂತರ ಪೊಲೀಸರು ಮತ್ತು ಏಂಟಿ ಟೆರರಿಸ್ಟ್ ಸ್ಕ್ವಾಡ್ ಜಂಟಿಯಾಗಿ ಆಪರೇಶನ್ ಕ್ಲೀನ್ ಹೆಸರಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ನಿವಾಸಿಗಳನ್ನು ಪತ್ತೆ ಮಾಡುವುದಕ್ಕಾಗಿ ರಹಸ್ಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎರಡು ದಿನಗಳ ಹಿಂದೆ ಎಟಿಎಸ್ ತಂಡದ ಸದಸ್ಯರು ಉತ್ತರ ಪರವೂರ್ ಗ್ರಾಮದ ಮನ್ನಾಮ್ ಏರಿಯಾದಲ್ಲಿ ಅತಿ ಹೆಚ್ಚು ಬಾಂಗ್ಲಾನ್ನರು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಶುಕ್ರವಾರ ರಾತ್ರಿ 11 ಗಂಟೆ ನಂತರ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಸಯೀದ್ ಮಹಮ್ಮದ್ ಎಂಬಾತನಿಗೆ ಸೇರಿದ ಕಟ್ಟಡ ಒಂದಕ್ಕೆ 70 ಮಂದಿಯಿದ್ದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿದ್ದರು. ಆ ಕಟ್ಟಡವನ್ನು ಹರ್ಷದ್ ಹುಸೈನ್ ಎಂಬಾತ ಲೀಸಿಗೆ ಪಡೆದು ವಲಸಿಗ ಕಾರ್ಮಿಕರಿಗೆ ಬಾಡಿಗೆ ಕೊಟ್ಟಿದ್ದ. ಎರಡು ಅಂತಸ್ತಿನ ಕಟ್ಟಡದಲ್ಲಿ ನೆಲೆಸಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ತಾವು ಪಶ್ಚಿಮ ಬಂಗಾಳ, ಅಸ್ಸಾಮ್ ಮೂಲದವರು ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದರು. ಪೊಲೀಸರ ದಾಳಿ ಸಂದರ್ಭದಲ್ಲಿ ಕಾರ್ಮಿಕರ ಐಡಿ, ಮೊಬೈಲ್ ಫೋನ್, ಪಾಸ್ ಪೋರ್ಟ್ ಇನ್ನಿತರ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ 27 ಮಂದಿ ಬಾಂಗ್ಲಾ ದೇಶಿಗರು ಎಂದು ತಿಳಿದುಬಂದಿದೆ.
ಬಂಧಿತ ಕಾರ್ಮಿಕರು ಭಾರತದ ಗಡಿರೇಖೆಯ ಮೂಲಕ ಅಕ್ರಮವಾಗಿ ನುಸುಳಿ ಬಂದಿದ್ದು, ಜನವರಿ ವೇಳೆಗೆ ಪಶ್ಚಿಮ ಬಂಗಾಳ ತಲುಪಿದ್ದರು. ಅಲ್ಲಿನ ಏಜಂಟ್ ಮೂಲಕ ನಕಲಿ ಐಡಿಗಳನ್ನು ಮಾಡಿಕೊಂಡು ಕೇರಳಕ್ಕೆ ತಲುಪಿದ್ದರು. ಇತ್ತೀಚೆಗೆ ಕೂಲಿ ಕಾರ್ಮಿಕರಾಗಿ ಕೆಲಸಕ್ಕೆ ಬಂದು ಸೇರಿದ್ದರು. ಇವರನ್ನೆಲ್ಲ ಇಲ್ಲಿನ ಗುತ್ತಿಗೆದಾರರು ಬಾಡಿಗೆಗೆ ಇಟ್ಟುಕೊಂಡಿದ್ದರು. ನಾವು ಅವರ ಮೇಲೆ ಅಕ್ರಮ ನೆಲೆಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ ಮೊದಲ ವಾರದಿಂದಲೇ ಎರ್ನಾಕುಲಂ ಪೊಲೀಸರು ಆಪರೇಶನ್ ಕ್ಲೀನ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎರ್ನಾಕುಲಂ ಜಿಲ್ಲೆಯಲ್ಲಿ ಈವರೆಗೆ 35 ಕಾರ್ಮಿಕರನ್ನು ಪತ್ತೆ ಮಾಡಲಾಗಿದೆ. ಕೊಚ್ಚಿಯಲ್ಲಿ ಆರು ಮಂದಿಯನ್ನು ಬಂಧನ ಮಾಡಲಾಗಿದೆ. ಎಟಿಎಸ್ ತಂಡವು ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸುತ್ತಿದೆ.
At least 27 Bangladeshi nationals who were allegedly illegally staying and working in Ernakulam district of Kerala have been arrested, police officials said on Friday, adding that detailed questioning of all those arrested is underway.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm