ಬ್ರೇಕಿಂಗ್ ನ್ಯೂಸ್
07-02-25 05:27 pm HK News Desk ದೇಶ - ವಿದೇಶ
ಜೈಪುರ, ಫೆ.7: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.
ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ.6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

![]()
ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ಗ್ರಾಮಾಂತರ ಎಸ್ಪಿ ಆನಂದ್ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.
ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗರಾಜ್ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
A tragic road accident in Rajasthan’s Dudu claimed eight lives and left six others injured as a Roadways bus lost control due to a tyre burst and collided with a car which was coming from the other side, an official said on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm