ಬ್ರೇಕಿಂಗ್ ನ್ಯೂಸ್
08-02-25 12:14 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು 70 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ಲಕ್ಷಣ ಕಂಡುಬಂದಿದೆ. ಬಿಜೆಪಿ 45 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದರೆ, ಆಪ್ ಪಕ್ಷವು 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಮೂಲಕ ಬಿಜೆಪಿ 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಹಿಡಿಯುವತ್ತ ಹೊರಟಿದೆ.
ಸತತ ಎರಡು ಬಾರಿ ದೆಹಲಿ ಅಧಿಕಾರ ಹಿಡಿದ ಆಮ್ ಆದ್ಮಿ ಪಕ್ಷ ಈ ಬಾರಿ ಸೋಲುತ್ತದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಮತ ನೀಡಲಿದ್ದಾರೆ, 40-45 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಎಂಟಕ್ಕೂ ಅಧಿಕ ಸಮೀಕ್ಷೆಗಳು ಹೇಳಿದ್ದವು. 11 ಎಕ್ಸಿಟ್ ಪೋಲ್ಗಳಲ್ಲಿ 8 ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಕಾಂಗ್ರೆಸ್ ಒಂದು ಸ್ಥಾನವನ್ನೂ ಗಳಿಸಲ್ಲ ಎಂದೂ ಹೇಳಿವೆ.
ಸದ್ಯಕ್ಕೆ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಹಾಲಿ ಸಿಎಂ ಅತಿಷಿ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ನಿಕಟ ಸ್ಪರ್ಧೆ ಒಡ್ಡಿದ್ದಾರೆ. ಆರಂಭಿಕ ಸುತ್ತಿನಲ್ಲಿ ಕೇಜ್ರಿವಾಲ್ ಮತ್ತು ಅತಿಷಿ ಹಿನ್ನಡೆ ಅನುಭವಿಸಿದ್ದಾರೆ. ಡಿಸಿಎಂ ಮನೀಶ್ ಸಿಸೋಡಿಯಾ, ಪ್ರಮುಖ ನಾಯಕರಾದ ಸೌರಭ್ ಭಾರದ್ವಾಜ್, ಗೋಪಾಲ್ ರಾಯ್ ಮುನ್ನಡೆ ಗಳಿಸಿದ್ದಾರೆ. ಎರಡು ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದರೂ, ರಾಜಧಾನಿ ಜನರು ಬಿಜೆಪಿಗೆ ದೆಹಲಿಯಲ್ಲಿ ಮತ ನೀಡಿರಲಿಲ್ಲ. ಈ ಬಾರಿ ಪೊರಕೆ ಹಿಡಿದ ಆಮ್ ಆದ್ಮಿಯನ್ನು ಲಿಕ್ಕರ್ ಹಗರಣದ ಧೂಳು ಧೂಳೀಪಟ ಮಾಡಿದೆ. ಕಾಂಗ್ರೆಸ್ ಛಾರ್ಮ್ ನೇಪಥ್ಯಕ್ಕೆ ಸರಿದಿದ್ದರಿಂದ ಬಿಜೆಪಿ ಮತ್ತೆ ಮೇಲೆದ್ದು ಕುಳಿತಿದೆ.

ಫಲಿತಾಂಶದ ಬಗ್ಗೆ ಹಲವರು ನಾನಾ ರೀತಿಯ ಟೀಕೆ ಮಾಡಿದ್ದಾರೆ. ಎಐಎಂಐಎಂ ಪಕ್ಷದ ಒವೈಸಿ, ಇಂಡಿಯಾ ಒಕ್ಕೂಟ ಜೊತೆಗೂಡಿ ಸ್ಪರ್ಧೆ ಮಾಡದಿರುವುದಕ್ಕೇ ಸೋಲಾಗಿದೆ ಎಂದು ಹೇಳಿದ್ದಾರೆ. ಅರವಿಂದ ಕೇಜ್ರಿವಾಲ್ ಜೊತೆಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದ ಅಣ್ಣಾ ಹಜಾರೆ, ದೆಹಲಿ ಲಿಕ್ಕರ್ ಹಗರಣದಿಂದಾಗಿ ಕೇಜ್ರಿವಾಲ್ ಇಮೇಜ್ ಗೆ ಧಕ್ಕೆಯಾಗಿದೆ. ರಾಜಕೀಯ ಕ್ಷೇತ್ರಕ್ಕೆ ಹೋಗುವುದಾದರೆ, ಸ್ವಚ್ಛ ವ್ಯಕ್ತಿತ್ವ ಇರಬೇಕು ಎಂದು ಹೇಳಿದ್ದೆ. ಅದನ್ನು ಅರವಿಂದ ಕೇಜ್ರಿವಾಲ್ ಉಳಿಸಿಕೊಂಡಿಲ್ಲ ಎಂದಿದ್ದಾರೆ.
The BJP is on its way to make a grand Delhi-waapsi, show the current official trends by the Election Commission of India. As per the latest trends, the BJP is leading on 45 seats. On the other hand, the Aam Aadmi Party is leading on 25 seats, way off mark than the magic figure of 36.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm