ಬ್ರೇಕಿಂಗ್ ನ್ಯೂಸ್
08-02-25 02:23 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ಲಿಕ್ಕರ್ ಹಗರಣದಲ್ಲಿ ಮುಳುಗೆದ್ದ ಆಮ್ ಆದ್ಮಿ ಪಕ್ಷವನ್ನು ದೆಹಲಿ ಮತದಾರ ಪೊರಕೆ ಹಿಡಿದು ಗುಡಿಸಿ ಹಾಕಿದ್ದಾನೆ. ಬಿಜೆಪಿ 46 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರೆ, ಆಪ್ ಪಕ್ಷವು 22 ಸ್ಥಾನಗಳನ್ನು ಪಡೆದು ಏದುಸಿರು ಬಿಟ್ಟಿದೆ.
ಆಪ್ ಮುಖ್ಯಮಂತ್ರಿ ಅತಿಷಿ ಕಾಲ್ಕಜಿ ಮತ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಸಾಧಿಸಿದರೆ, ಮಾಜಿ ಮುಖ್ಯಮಂತ್ರಿ, ಆಪ್ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅಚ್ಚರಿಯ ಸೋಲು ಕಂಡಿದ್ದಾರೆ. ಅತಿಷಿ ಪ್ರತಿಸ್ಪರ್ಧಿ ಬಿಜೆಪಿಯ ರಮೇಶ್ ಬಿಧೂರಿ ವಿರುದ್ಧ 2700 ಮತಗಳಿಂದ ಗೆಲುವು ಪಡೆದಿದ್ದಾರೆ.
ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ 21561 ಮತ ಗಳಿಸಿದ್ದು ಬಿಜೆಪಿಯ ಪರ್ವೇಶ್ ವರ್ಮಾ (24743) ವಿರುದ್ಧ 3152 ಮತಗಳಿಂದ ಸೋಲುಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸಿನ ಸಂದೀಪ್ ದೀಕ್ಷಿತ್ 3113 ಮತಗಳನ್ನಷ್ಟೆ ಪಡೆದಿದ್ದಾರೆ.
ಡಿಸಿಎಂ ಮನೀಶ್ ಸಿಸೋಡಿಯಾ (30724) ಜಾನ್ ಪುರ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎದುರಾಳಿ ಬಿಜೆಪಿಯ ತರ್ವಿಂದರ್ ಸಿಂಗ್ ಮರ್ವಾ (31593) ವಿರುದ್ಧ ಅಲ್ಪ ಅಂತರದಲ್ಲಿ ಸೋಲನುಭವಿಸಿದ್ದಾರೆ.
ಆಮ್ ಆದ್ಮಿ ಪಕ್ಷವು ಸತತ ನಾಲ್ಕನೇ ಬಾರಿಗೆ ದೆಹಲಿ ಗದ್ದುಗೆ ಪಡೆಯಲು ಸಿದ್ಧತೆ ನಡೆಸಿತ್ತು. ಆದರೆ ಆಪ್ ಆಡಳಿತಕ್ಕೆ ಆಡಳಿತ ವಿರೋಧಿ ಅಲೆಯೂ ಜೋರಾಗಿತ್ತು. ಇದನ್ನು ಸೆಳೆದುಕೊಳ್ಳುವಲ್ಲಿ ಕಾಂಗ್ರೆಸ್ ಸೋತಿದ್ದರೆ, ಬಿಜೆಪಿಗೆ ವರವಾಗಿ ಪರಿಣಮಿಸಿತು. ಇದರಿಂದಾಗಿ 70 ಕ್ಷೇತ್ರಗಳಲ್ಲಿ ಬಿಜೆಪಿ ಯಾರೂ ಊಹಿಸದ ರೀತಿಯ ಗೆಲುವು ದಾಖಲಿಸಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ - ಆಪ್ - ಬಿಜೆಪಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ಬಿಜೆಪಿ ವಿರೋಧಿ ಕೂಟಕ್ಕೆ ಸೋಲಾಗಿದೆ.
Election Commission of India Delhi results LIVE: Current standings indicate that the BJP is set to return to power in Delhi after 27 years, with party leading/winning in 48 seats, while AAP is ahead/has won 22, much below the majority mark of 36, according to EC data at around 1:20 pm.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm