ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.

ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm