ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.
ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm