ಬ್ರೇಕಿಂಗ್ ನ್ಯೂಸ್
18-02-25 10:45 pm HK News Desk ದೇಶ - ವಿದೇಶ
ಕೊಟ್ಟಾಯಂ, ಫೆ.18: ಉತ್ತರ ಭಾರತದಲ್ಲಿ ಮುಸ್ಲಿಮರ ಮಸೀದಿಯ ಒಳಗಡೆ ಹಿಂದುಗಳ ವಿಗ್ರಹ ಪೂಜೆ, ಆರಾಧನಾ ಪದ್ಧತಿಯ ಕುರುಹು ಕಂಡುಬಂದಿರುವುದು ವಿವಾದಕ್ಕೆ ಕಾರಣವಾಗಿರುವಾಗಲೇ ಕೇರಳದಲ್ಲಿ ಕ್ರಿಸ್ತಿಯನ್ನರ ಬಿಷಪ್ ಹೌಸ್ ಆವರಣದಲ್ಲಿ ಹಿಂದೂ ದೇವರ ವಿಗ್ರಹ ಪತ್ತೆಯಾಗಿದ್ದು ವಿಭಿನ್ನ ರೀತಿಯ ಪ್ರತಿಕ್ರಿಯೆಗೆ ಸಾಕ್ಷಿಯಾಗಿದೆ.
ಕೊಟ್ಟಾಯಂ ಜಿಲ್ಲೆಯ ಪಾಲಾದಲ್ಲಿರುವ ಸೀರೋ ಮಲಬಾರ್ ಚರ್ಚ್ ಆವರಣದಲ್ಲಿ ಕೆಲದಿನಗಳ ಹಿಂದೆ ಭೂಮಿಯನ್ನು ಅಗೆಯುತ್ತಿದ್ದಾಗ ಶಿವಲಿಂಗ ಮತ್ತು ಪಾರ್ವತಿಯ ವಿಗ್ರಹಗಳು ಪತ್ತೆಯಾಗಿವೆ. ಚರ್ಚ್ ಆವರಣದ ಜಾಗದಲ್ಲಿ ಮರಗೆಣಸು ಬೆಳೆಸುವುದಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಅಚಾನಕ್ಕಾಗಿ ಹಿಂದು ದೇವರ ವಿಗ್ರಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಹಿಂದುಗಳು ಸೇರಿದ್ದು, ಭಕ್ತಿಯಿಂದ ವಿಗ್ರಹಗಳಿಗೆ ಪೂಜೆ ನೆರವೇರಿಸಿದ್ದಾರೆ.
ಪಾಲಾ ಗ್ರಾಮದ ವೆಲ್ಲಪಾಡ್ ಭಗವತಿ ದೇವಸ್ಥಾನದಿಂದ 700 ಮೀಟರ್ ದೂರದಲ್ಲಿ ಈ ವಿಗ್ರಹ ಪತ್ತೆಯಾಗಿದೆ. ಅಂದಾಜು ನೂರು ವರ್ಷಗಳ ಹಿಂದೆ ಈ ಜಾಗದಲ್ಲಿ ಬ್ರಾಹ್ಮಣರ ಕುಟುಂಬ ವಾಸವಿತ್ತು. ಆನಂತರದ ವರ್ಷಗಳಲ್ಲಿ ಬ್ರಾಹ್ಮಣರ ಕುಟುಂಬ ನಾಶಗೊಂಡಿದ್ದು ಸದ್ರಿ ಜಾಗವು ಬೇರೆಯವರಿಗೆ ಕೈಬದಲಾಗಿತ್ತು. ಬಿಷಪ್ ಹೌಸ್ ಅಸ್ತಿತ್ವಕ್ಕೆ ಬಂದ ಬಳಿಕ ಅಲ್ಲಿನ ಜಾಗ ಅವರ ಅಧೀನಕ್ಕೆ ಬಂದಿತ್ತು. ಇದೀಗ ಸದ್ರಿ ಜಾಗದಲ್ಲಿ ಹಿಂದು ದೇವರ ವಿಗ್ರಹ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಸೇರಿದ್ದು, ಬಿಷಪ್ ಹೌಸ್ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಸ್ಥಳೀಯ ಭಗವತಿ ದೇವಸ್ಥಾನದ ಪ್ರತಿನಿಧಿಗಳು, ಅರ್ಚಕರು ಬಿಷಪ್ ಹೌಸ್ ಪ್ರತಿನಿಧಿಗಳ ಜೊತೆಗೆ ಮುಂದೆ ಏನು ಮಾಡುವುದೆಂದು ಮಾತುಕತೆ ನಡೆಸಿದ್ದಾರೆ. ಸದ್ಯಕ್ಕೆ ಮುಂದಿನ ನಿರ್ಧಾರ ತಿಳಿಸುವ ಬಗ್ಗೆ ಸಮಯಾವಕಾಶ ಕೇಳಿದ್ದೇವೆ, ಸೂಕ್ತ ನಿರ್ಧಾರಕ್ಕೆ ಬರುತ್ತೇವೆ ಎಂದು ಬಿಷಪ್ ಹೌಸ್ ಚಾನ್ಸಲರ್ ಫಾದರ್ ಜೋಸೆಫ್ ಕುತ್ತಿಯಾಂಕಲ್ ತಿಳಿಸಿದ್ದಾರೆ. ಇದೇ ವೇಳೆ, ಭಗವತಿ ದೇವಸ್ಥಾನದ ಪ್ರಮುಖರು ಹಿಂದುಗಳ ಆರಾಧನಾ ಪದ್ಧತಿ ಪ್ರಕಾರ ಸ್ಥಳದ ಬಗ್ಗೆ ಪ್ರಶ್ನಾ ಚಿಂತನೆ ನೆರವೇರಿಸಲು ಮುಂದಾಗಿದ್ದಾರೆ. ದೇವರ ಚಿತ್ತ ಏನಿದೆಯೆಂದು ತಿಳಿದು ಬಿಷಪ್ ಹೌಸ್ ಪ್ರತಿನಿಧಿಗಳ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಭಗವತಿ ದೇವಸ್ಥಾನದ ವಿನೋದ್ ಪುನ್ನಮತ್ತಿಲ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಸೌಹಾರ್ದ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ಹಿಂದುಗಳು ಮತ್ತು ಕ್ರಿಸ್ತಿಯನ್ನರು ಮುಂದಾಗಿದ್ದಾರೆ.
Kerala Discovery of Hindu idols from Bishop House’s land in Pala diocese efforts under way to settle issue amicably. Remains, believed to be of an old temple, including idols of Lord Shiva and Goddess Parvathy, were unearthed recently while preparing land for tapioca farming on Pala Bishop House premises.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm