ಬ್ರೇಕಿಂಗ್ ನ್ಯೂಸ್
19-02-25 11:00 pm HK News Desk ದೇಶ - ವಿದೇಶ
ನವದೆಹಲಿ, ಫೆ.19: ದೆಹಲಿಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಬಿಜೆಪಿ ಸಿಎಂ ಹುದ್ದೆಗೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದೆ. ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಮೊದಲ ಬಾರಿ ಶಾಸಕಿಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ 1998ರಲ್ಲಿ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಬಿಜೆಪಿ ಮುಖ್ಯಮಂತ್ರಿಯಾಗಿದ್ದರು.
ಇದೀಗ ದೆಹಲಿಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಬಿಜೆಪಿಗೆ ಮತ್ತೊಬ್ಬ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ. ಅಂದಹಾಗೆ, ರೇಖಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಸುಷ್ಮಾ ಸ್ವರಾಜ್, ಆನಂತರ ಕಾಂಗ್ರೆಸಿನ ಶೀಲಾ ದೀಕ್ಷಿತ್, ಆಪ್ ಪಕ್ಷದಿಂದ ನಾಲ್ಕು ತಿಂಗಳ ಹಿಂದೆ ಆತಿಷಿ ಮುಖ್ಯಮಂತ್ರಿಯಾಗಿದ್ದರು. ಇದೀಗ ಮತ್ತೊಬ್ಬ ಮಹಿಳೆ ರೇಖಾ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ದೇಶದ 18 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ, ಯಾವುದೇ ಕಡೆ ಮಹಿಳಾ ಮುಖ್ಯಮಂತ್ರಿ ಇಲ್ಲ. ಇದೀಗ ರೇಖಾ ಗುಪ್ತಾ ಅವರನ್ನು ಸಿಎಂ ಸ್ಥಾನಕ್ಕೇರಿಸಿ ಆ ಅಪವಾದವನ್ನು ಹೋಗಲಾಡಿಸಿದೆ. ಉಳಿದಂತೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಬ್ಬ ಮಹಿಳೆಯಾಗಿ ಅಧಿಕಾರ ನಡೆಸುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಗಾದಿಗೆ ಹಲವರು ಆಕಾಂಕ್ಷಿಗಳಾಗಿದ್ದರು. ಮಹಿಳಾ ಕೋಟಾದಿಂದಲೇ ನಾಲ್ಕು ಮಂದಿ ಪ್ರಬಲ ಲಾಬಿ ನಡೆಸುತ್ತಿದ್ದರು. ವೀಕ್ಷಕರಾಗಿ ರವಿಶಂಕರ್ ಪ್ರಸಾದ್ ಮತ್ತು ಓಂಪ್ರಕಾಶ್ ಧನ್ಕರ್, 48 ಮಂದಿ ಶಾಸಕರ ಸಭೆಯ ಬಳಿಕ ಮಾಹಿತಿಯನ್ನು ಕೇಂದ್ರಕ್ಕೆ ರವಾನಿಸಿದ್ದರು. ಆನಂತರ, ಕೇಂದ್ರೀಯ ಸಂಸದೀಯ ಸಮಿತಿ ಅಳೆದು ತೂಗಿ ರೇಖಾ ಗುಪ್ತಾರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಫೆ.20ರಂದು ಬೆಳಗ್ಗೆ ಹತ್ತಕ್ಕೆ ರಾಮಲೀಲಾ ಮೈದಾನದಲ್ಲಿ ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
he Delhi government will be led by a woman Chief Minister again as the BJP zeroed in Rekha Gupta, its first-time MLA from Shalimar Bagh, for the Chief Minister's post. The decision was taken at a meeting of the party's legislature party this evening. Ms Gupta succeeds Aam Aadmi Party's Atishi after the BJP ended the 10-year-rule of Arvind Kejriwal's party in the recently concluded assembly election.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm