ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm