ಬ್ರೇಕಿಂಗ್ ನ್ಯೂಸ್
10-03-25 10:17 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮಾ 10: ಅಮೆರಿಕದ ಪಿಟ್ಸ್ಬರ್ಗ್ ವಿಶ್ವವಿದ್ಯಾಲಯದ 20 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿಯೋರ್ವಳು, ಪುಂಟಾ ಕಾನಾ ಬೀಚ್ನಲ್ಲಿ ನಾಪತ್ತೆಯಾಗಿದ್ದಾಳೆ. ಸ್ಪ್ರಿಂಗ್ ಬ್ರೇಕ್ ಪ್ರವಾಸಕ್ಕೆ ತೆರಳಿದ್ದ ವರ್ಜಿನಿಯಾದ ಆಶ್ಬರ್ನ್ನ ಸುದೀಕ್ಷಾ ಕೋಣಂಕಿ, ಪುಂಟಾ ಕಾನಾದ ಬೀಚ್ನಲ್ಲಿ ಕೊನೆಯ ಬಾರಿಗೆ ಕಂದು ಬಣ್ಣದ ಬಿಕನಿ ತೊಟ್ಟು ನಡೆಯುತ್ತಿದ್ದುದನ್ನು ಸ್ಥಳೀಯರು ನೋಡಿದ್ದಾಗಿ ಮೂಲಗಳು ಖಚಿತಪಡಿಸಿವೆ.
ಕಳೆದ ಮಾರ್ಚ್ 6 ಅಂದ್ರೆ ಗುರುವಾರ ಬೆಳಿಗ್ಗೆ 4:50ಕ್ಕೆ ರಿಯು ರಿಪಬ್ಲಿಕಾ ರೆಸಾರ್ಟ್ ಬೀಚ್ನಲ್ಲಿ, ಸುದೀಕ್ಷಾ ಕೊನೆಯದಾಗಿ ಕಾಣಿಸಿಕೊಂಡಿದ್ದಳು.ಆಕೆಯನ್ನು ಕಂದು ಬಣ್ಣದ ಬಿಕನಿ ತೊಟ್ಟು ಬೀಚ್ನಲ್ಲಿ ನಡೆದುಕೊಂಡು ಹೋಗಿದ್ದನ್ನು ಸ್ಥಳೀಯರು ನೋಡಿದ್ದರು. ಅದಾದ ಬಳಿಕ ಆಕೆ ನಾಪತ್ತೆಯಾಗಿದ್ದು, ಡೊಮಿನಿಕನ್ ರಿಪಬ್ಲಿಕ್ ಅಧಿಕಾರಿಗಳು ಸುದೀಕ್ಷಾಳಿಗಾಗಿ ಶೋಧ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ



"ಸುದೀಕ್ಷಾ ಸ್ಪ್ರಿಂಗ್ ಬ್ರೇಕ್ ಪ್ರವಾಸಕ್ಕೆಂದು ಪುಂಟಾ ಕಾನಾ ಬೀಚ್ಗೆ ತಮ್ಮ ಗೆಳೆಯರೊಂದಿಗೆ ಬಂದಿದ್ದರು. ಆದರೆ ಆಕೆ ಅಷ್ಟು ಬೆಳಗಿನ ಜಾವ ಏಕಾಂಗಿಯಾಗಿ ಬೀಚ್ಗೆ ಬಂದಿದ್ದೇಕೆ ಎಂಬುದು ಅಸ್ಪಷ್ಟವಾಗಿದ್ದು, ಆಕೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿರಬಹುದೇ ಎಂಬ ಅನುಮಾನ ಕಾಡುತ್ತಿದೆ.." ಎಂದು ಡೊಮೊನಿಕನ್ ರಿಪಬ್ಲಿಕನ್ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸುದೀಕ್ಷಾಳನ್ನ ಹುಡುಕಲು ಮತ್ತು ಸುರಕ್ಷಿತವಾಗಿ ಮನೆಗೆ ಕರೆತರಲು ನಾವು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಆಕೆಯ ಇರುವಿಕೆಯ ಬಗ್ಗೆ ಯಾರಿಗಾದರೂ ಮಾಹಿತಿ ಲಭ್ಯವಾದರೆ, ಲೌಡೌನ್ ಕೌಂಟಿ ಶೆರಿಫ್ ಕಚೇರಿಯನ್ನ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಅಮೆರಿಕದ ಪ್ರತಿಷ್ಠಿತ ಪಿಟ್ಸ್ಬರ್ಗ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ಸುದೀಕ್ಷಾ, ಪುಂಟಾ ಕಾನಾದ ರೆಸಾರ್ಟ್ ಬೀಚ್ನಲ್ಲಿ ಪರಿಚಿತರಾದ ಹೊಸ ಗೆಳೆಯರೊಂದಿಗೆ ಬೆಳಗಿನ ಜಾವ 4 ಗಂಟೆಗೆ ಪಾರ್ಟಿ ಮಾಡಲೆಂದು ಬೀಚ್ಗೆ ತೆರಳಿದ್ದಳು ಎನ್ನಲಾಗಿದೆ.
ಸದ್ಯ ಮಗಳು ಕಾಣೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುದೀಕ್ಷಾಳ ತಂದೆ ಸುಬ್ಬರಾಯುಡು, "ವೈದ್ಯೆಯಾಗುವ ಕನಸು ಕಂಡಿದ್ದ ನನ್ನ ಮಗಳು ತುಂಬ ಒಳ್ಳೆಯವಳು. ಆಕೆ ಹೀಗೆ ದಿಢೀರ್ ನಾಪತ್ತೆಯಾಗಿರುವುದು ಕುಟುಂಬಸ್ಥರನ್ನು ನಲುಗಿಸಿದೆ. ಅಧಿಕಾರಿಗಳು ದಯವಿಟ್ಟು ನನ್ನ ಮಗಳನ್ನು ಹುಡುಕಿ ಕೊಡಬೇಕಾಗಿ ವಿನಂತಿಸುತ್ತೇನೆ.." ಎಂದು ಗದ್ಗದಿತರಾಗಿ ಹೇಳಿದ್ದಾರೆ.
A 20-year-old Indian-origin student, Sudiksha Konanki, has gone missing from a resort in the Dominican Republic. She was on a spring break trip with friends from the University of Pittsburgh, US, when she disappeared.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am