ಬ್ರೇಕಿಂಗ್ ನ್ಯೂಸ್
12-03-25 11:41 am HK News Desk ದೇಶ - ವಿದೇಶ
ಕರಾಚಿ, ಮಾ.12 : ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರೈಲನ್ನು ಬಲೂಚ್ ಬಂಡುಕೋರ ಉಗ್ರರು ಅಪಹರಿಸಿದ್ದಾರೆ. ಸೋಮವಾರ ಸಂಜೆ ಪಾಕಿಸ್ತಾನ ರೈಲನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದು ಪ್ರಯಾಣಿಕರು ಮತ್ತು ಭದ್ರತಾ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಕೊನೆಗೆ, ಪ್ರಯಾಣಿಕರನ್ನು ಬಿಟ್ಟು ಕಳಿಸಿದ್ದಾರೆ ಎನ್ನಲಾಗುತ್ತಿದ್ದು 214 ಭದ್ರತಾ ಸಿಬಂದಿಯನ್ನು ವಶದಲ್ಲಿ ಇರಿಸಿಕೊಂಡಿದ್ದಾರೆ.
ಬಲೂಚಿಸ್ತಾನದ ಕ್ವೆಟ್ಟಾದಿಂದ ಖೈಬರ್ ಪಖ್ತುಂಖ್ವಾದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಸೋಮವಾರ ಸಂಜೆ ಉಗ್ರರು ದಾಳಿಗೈದು ರೈಲನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಜಾಫರ್ ಎಕ್ಸ್ಪ್ರೆಸ್ ರೈಲು ಸುರಂಗ ಮಾರ್ಗದಲ್ಲಿ ತೆರಳುತ್ತಿದ್ದಾಗ ಹಳಿಯನ್ನು ತಪ್ಪಿಸಿ ರೈಲನ್ನು ನಿಲ್ಲಿಸಲಾಗಿದ್ದು ರೈಲು ಚಾಲಕ ಮತ್ತು ಸಿಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರೈಲಿನ ಲೋಕೊಮೊಟಿವ್ ಪೈಲಟ್ ಸಾವಿಗೀಡಾಗಿದ್ದಾರೆ. ಹಲವು ಸಿಬಂದಿ, ಪ್ರಯಾಣಿಕರು ಗಾಯಗೊಂಡಿದ್ದಾರೆ.


![]()
![]()
ನಿನ್ನೆ ರಾತ್ರಿ ವೇಳೆ ಪಾಕಿಸ್ತಾನದ ಮಿಲಿಟರಿ ಪಡೆ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದು 30ಕ್ಕು ಹೆಚ್ಚು ಉಗ್ರರನ್ನು ಕೊಂದು ಹಾಕಿದೆ. ಈ ವೇಳೆ, ಪರ್ವತಗಳ ಎಡೆಯಲ್ಲಿ ಉಗ್ರರು ಅವಿತುಕೊಂಡಿದ್ದು ಪ್ರಯಾಣಿಕರನ್ನು ಮತ್ತು ಭದ್ರತಾ ಸಿಬಂದಿಯನ್ನು ಅಲ್ಲಿಯೇ ವಶದಲ್ಲಿ ಇರಿಸಿದ್ದಾರೆ ಎನ್ನಲಾಗುತ್ತಿದೆ. 150ರಷ್ಟು ಒತ್ತೆಯಾಳುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಾಕ್ ಸೇನೆ ಹೇಳುತ್ತಿದ್ದು ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಪಾಕ್ ಸೇನಾಪಡೆ ಯೋಧರು, ಪೊಲೀಸ್ ಸಿಬಂದಿ, ಭಯೋತ್ಪಾದನಾ ನಿಗ್ರಹ ಪಡೆ ಅಧಿಕಾರಿಗಳನ್ನು ಉಗ್ರರು ವಶದಲ್ಲಿ ಇರಿಸಿದ್ದಾರೆ ಎನ್ನುವ ಮಾಹಿತಿಯಿದೆ. ಪಾಕ್ ಸೇನಾಪಡೆ ಪ್ರತಿದಾಳಿ ನಡೆಸಿದಲ್ಲಿ ಪರಿಣಾಮ ಕೆಟ್ಟದಾಗಲಿದೆ. ನಮ್ಮ ವಿರುದ್ಧ ದಾಳಿ ನಡೆಸಿದರೆ ಎಲ್ಲ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ.
A passenger, who was aboard the Jaffar Express that was hijacked by the separatist militant group Baloch Liberation Army (BLA) on Tuesday, said that he remembers screaming and a lot of commotion inside the carriage. He, along with his wife and children, were asked by the militants to get down the train and not "look back" during the process.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am