ಬ್ರೇಕಿಂಗ್ ನ್ಯೂಸ್
31-03-25 09:34 pm HK News Desk ದೇಶ - ವಿದೇಶ
ಮುಂಬೈ, ಮಾ.31: ಔರಂಗಜೇಬ್ ಸಮಾಧಿ ತೆರವು ಮಾಡಬೇಕೆಂದು ಹಿಂದುತ್ವವಾದಿ ಸಂಘಟನೆಗಳು ಧ್ವನಿ ಎತ್ತಿರುವಾಗಲೇ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಖಾರ ಪ್ರತಿಕ್ರಿಯೆ ನೀಡಿದ್ದು ನಮ್ಮ ಜನರು ಇತಿಹಾಸವನ್ನು ಪುಸ್ತಕದ ಅಧ್ಯಯನದಿಂದ ಕಲಿತುಕೊಳ್ಳಬೇಕೇ ವಿನಾ ವಾಟ್ಸಪ್ ಯುನಿವರ್ಸಿಟಿಯಿಂದ ಅಲ್ಲ ಎಂದು ಕೆಣಕಿದ್ದಾರೆ.
ವಾಟ್ಸಪ್ ಇತಿಹಾಸದಿಂದ ಪ್ರೇರಿತರಾದವರು ಔರಂಗಜೇಬ್ ಸಮಾಧಿಯನ್ನು ಕೆಡವಲು ಹೇಳುತ್ತಿದ್ದಾರೆ. ಆದರೆ ನೈಜ ಇತಿಹಾಸವನ್ನು ಪುಸ್ತಕ ಓದಿ ತಿಳಿದುಕೊಳ್ಳಬೇಕು. ನಾವು ಆಧುನಿಕ ಕಾಲದ ನೈಜ ವಿಚಾರಗಳನ್ನು ಮರೆಯುತ್ತಿದ್ದೇವೆ. ಛಾವಾ ಸಿನಿಮಾದಿಂದಾಗಿ ಹಿಂದುಗಳು ಎಚ್ಚತ್ತುಕೊಂಡರೆ ಏನೂ ಉಪಯೋಗವಿಲ್ಲ. ವಿಕ್ಕಿ ಕೌಶಲ್ ನಿಂದಾಗಿ ಸಂಭಾಜಿ ಮಹಾರಾಜ್ ತ್ಯಾಗ ಮಾಡುವುದರ ಬಗ್ಗೆಯಾಗಲೀ, ಅಕ್ಷಯ್ ಖನ್ನಾ ತೋರಿಸಿದ ಔರಂಗಜೇಬನ ಕುರಿತಾಗಲೀ ನೈಜ ಇತಿಹಾಸ ತಿಳಿಯಲು ಮುಂದಾಗಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜಾಪುರ ಆದಿಲ್ ಶಾಹಿಗಳ ನೇನಾಧಿಪತಿಯಾಗಿದ್ದ ಅಫ್ಜಲ್ ಖಾನ್ ನನ್ನು ಶಿವಾಜಿ ಮಹಾರಾಜರ ಅಣತಿಯಂತೆ ಪ್ರತಾಪಗಢ ಕೋಟೆಯ ಬಳಿ ಸಮಾಧಿ ಮಾಡಲಾಗಿತ್ತು ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಸಂಭಾಜಿ ನಗರ್ ಜಿಲ್ಲೆಯಲ್ಲಿರುವ ಔರಂಗಜೇಬನ ಸಮಾಧಿಯನ್ನು ಕೆಡವಿ ಹಾಕಬೇಕು ಎಂದು ಹಿಂದು ಸಂಘಟನೆಗಳು ಅಭಿಯಾನ ಮಾಡಿರುವಾಗಲೇ ಹಿಂದುತ್ವವಾದಿ ರಾಜ್ ಠಾಕ್ರೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಔರಂಗಜೇಬ ಗುಜರಾತಿನ ದಾಹೋದ್ ನಲ್ಲಿ ಜನಿಸಿದ್ದ. ಆದರೆ ನಮ್ಮ ಇತಿಹಾಸಕಾರರು ರಾಜಕೀಯ ಲಾಭಕ್ಕಾಗಿ ಅದನ್ನು ತಿರುಚಿದ್ದಾರೆ. ಒಂದು ದೇಶವು ಕೇವಲ ಧರ್ಮದ ಆಧಾರದಲ್ಲಿ ಹೋದರೆ ಮುನ್ನಡೆಯಲು ಸಾಧ್ಯವಿಲ್ಲ. ಆಧುನೀಕರಣದ ಜೊತೆಗೆ ಹೆಜ್ಜೆ ಹಾಕುತ್ತಿರುವ ಟರ್ಕಿಯನ್ನು ನಾವು ಉದಾಹರಣೆಯಾಗಿ ನೋಡಬೇಕು ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
Maharashtra Navnirman Sena (MNS) chief Raj Thackeray on Sunday condemned attempts to incite communal tensions over Aurangzeb's tomb and urged people not to view history through the lens of caste and religion. Addressing his annual Gudi Padwa rally at Shivaji Park in Mumbai, Thackeray cautioned against misleading historical narratives and WhatsApp forwards, asserting that history should be studied from credible sources rather than social media.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm