ಬ್ರೇಕಿಂಗ್ ನ್ಯೂಸ್
07-04-25 10:01 pm HK News Desk ದೇಶ - ವಿದೇಶ
ನವದೆಹಲಿ, ಎ.7 : ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಕೇಂದ್ರ ಸರ್ಕಾರವೂ ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಇದರ ಜೊತೆಗೆ, ಎಲ್ ಪಿಜಿ ಸಿಲಿಂಡರ್ ಮೇಲಿನ ದರವನ್ನೂ 50 ರೂ. ಹೆಚ್ಚಿಸಲಾಗಿದೆ.
ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಲೆ ಏರಿಕೆಯು ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. "ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಎಲ್ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲ ಯೋಜನೆಯ ಹೊರತಾದ ಬಳಕೆದಾರರಿಗೆ 803ರಿಂದ 853 ಕ್ಕೆ ಹೆಚ್ಚಾಗಲಿದೆ" ಎಂದು ಸಚಿವ ಪುರಿ ತಿಳಿಸಿದ್ದಾರೆ.
ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಆದಾಗ್ಯೂ, ಈ ಹೆಚ್ಚಳವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 2 ರೂ. ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಅಮೆರಿಕದ ಆಡಳಿತವು ವಿಧಿಸಿರುವ ಸುಂಕಗಳ ಪರಿಣಾಮ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಏತನ್ಮಧ್ಯೆ, ಅಬಕಾರಿ ಸುಂಕ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ಬದಲಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
The government hiked excise duty on petrol and diesel by Rs 2 per litre, using the opportunity provided by the falling international oil prices to shore up its revenue. The duty hike will not push up pump prices but the government has allowed companies to raise cooking gas prices on which there was no tax increase.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm