ಬ್ರೇಕಿಂಗ್ ನ್ಯೂಸ್
07-04-25 10:01 pm HK News Desk ದೇಶ - ವಿದೇಶ
ನವದೆಹಲಿ, ಎ.7 : ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಕೇಂದ್ರ ಸರ್ಕಾರವೂ ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಇದರ ಜೊತೆಗೆ, ಎಲ್ ಪಿಜಿ ಸಿಲಿಂಡರ್ ಮೇಲಿನ ದರವನ್ನೂ 50 ರೂ. ಹೆಚ್ಚಿಸಲಾಗಿದೆ.
ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಲೆ ಏರಿಕೆಯು ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. "ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಎಲ್ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲ ಯೋಜನೆಯ ಹೊರತಾದ ಬಳಕೆದಾರರಿಗೆ 803ರಿಂದ 853 ಕ್ಕೆ ಹೆಚ್ಚಾಗಲಿದೆ" ಎಂದು ಸಚಿವ ಪುರಿ ತಿಳಿಸಿದ್ದಾರೆ.
ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಆದಾಗ್ಯೂ, ಈ ಹೆಚ್ಚಳವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 2 ರೂ. ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಅಮೆರಿಕದ ಆಡಳಿತವು ವಿಧಿಸಿರುವ ಸುಂಕಗಳ ಪರಿಣಾಮ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಏತನ್ಮಧ್ಯೆ, ಅಬಕಾರಿ ಸುಂಕ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ಬದಲಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
The government hiked excise duty on petrol and diesel by Rs 2 per litre, using the opportunity provided by the falling international oil prices to shore up its revenue. The duty hike will not push up pump prices but the government has allowed companies to raise cooking gas prices on which there was no tax increase.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm