ಬ್ರೇಕಿಂಗ್ ನ್ಯೂಸ್
22-04-25 07:13 pm HK News Desk ದೇಶ - ವಿದೇಶ
ನವದೆಹಲಿ, ಎ.22 : ವಿದೇಶಕ್ಕೆ ಹೋಗಿ ಭಾರತದ ಸಾಂವಿಧಾನಿಕ ಸಂಸ್ಥೆಗಳನ್ನು ಟೀಕಿಸುವ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಮುಂದುವರಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು ಚುನಾವಣಾ ಆಯೋಗ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬೋಸ್ಟನ್ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿ, ‘ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದೊಳಗಿನ ವಯಸ್ಕ ಮತದಾರರ ಸಂಖ್ಯೆಗಿಂತ ಹೆಚ್ಚು ಮತಗಳು ಚಲಾವಣೆಯಾಗಿದ್ದವು. ಚುನಾವಣಾ ಆಯೋಗ ನೀಡಿದ ಮಾಹಿತಿ ಪ್ರಕಾರ ಸಂಜೆ 5.30ರಿಂದ 7.30ರ ನಡುವಿನ ಕೇವಲ 2 ತಾಸಿನ ಅವಧಿಯಲ್ಲಿ 65 ಲಕ್ಷ ಮತಗಳು ಚಲಾವಣೆಯಾಗಿದ್ದವು. ಒಬ್ಬ ಮತದಾರನಿಗೆ ಮತ ಹಾಕಲು ಅಂದಾಜು 3 ನಿಮಿಷಗಳಾದರೂ ಬೇಕು. ಹೀಗೆ ಲೆಕ್ಕ ಹಾಕಿದರೆ, ಮರುದಿನ ನಸುಕಿನ 2 ಗಂಟೆಯವರೆಗೂ ಮತದಾನಕ್ಕೆ ಜನರು ಸರದಿಯಲ್ಲಿ ಇರಬೇಕಿತ್ತು. ಆದರೆ ಹಾಗಾಗಿಲ್ಲ. ಕೇವಲ 2 ತಾಸಿನಲ್ಲಿ 65 ಲಕ್ಷ ಜನ ಮತ ಚಲಾಯಿಸಿದ್ದಾರೆ ಎಂದು ಆಯೋಗ ಹೇಳಿದೆ’ ಎಂದರು.
ಹೀಗಾಗಿ ನಾವು ಸಂದೇಹ ಬಗೆಹರಿಸಿಕೊಳ್ಳಲು ಮತದಾನ ಪ್ರಕ್ರಿಯೆ ವಿಡಿಯೋ ಕೇಳಿದೆವು. ಆಯೋಗ ಅದನ್ನು ಕೊಡಲು ನಿರಾಕರಿಸಿದ್ದಲ್ಲದೆ, ಅದನ್ನು ಕೇಳಲು ಅವಕಾಶವೇ ಇರದಂತೆ ಕಾನೂನನ್ನೇ ಬದಲಿಸಿತು. ಈ ವ್ಯವಸ್ಥೆಯಲ್ಲಿ ಸಮಸ್ಯೆ ಇರುವುದು ಸ್ಪಷ್ಟ. ಚುನಾವಣಾ ಆಯೋಗ ಬಿಜೆಪಿ ಜೊತೆಗೆ ರಾಜಿ ಮಾಡಿಕೊಳ್ಳುತ್ತಿದೆ. ಇದನ್ನು ನಾನು ಅನೇಕ ಬಾರಿ ಹೇಳಿದ್ದೇನೆ ಎಂದು ರಾಹುಲ್ ಆಪಾದಿಸಿದರು. ಅಮೆರಿಕದ ಬ್ರೌನ್ ವಿವಿ ಹಾಗೂ ಇನ್ನೂ ಕೆಲವು ಕಡೆ ಏ.21 ಹಾಗೂ 22ರಂದು ರಾಹುಲ್ ಮಾತನಾಡಲಿದ್ದಾರೆ. ವಿದೇಶದಲ್ಲಿ ನಿಂತು ದೇಶದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಟೀಕಿಸಿ, ರಾಹುಲ್ ಈ ಹಿಂದೆಯೂ ಹಲವು ಬಾರಿ ದೇಶವಾಸಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಹುಲ್ ದ್ರೋಹಿ-ಬಿಜೆಪಿ ಕಿಡಿ
ಚುನಾವಣಾ ಆಯೋಗದ ವಿರುದ್ಧ ರಾಹುಲ್ ಮಾಡಿದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಭಿತ್ ಪಾತ್ರಾ, ‘ವಿದೇಶಿ ನೆಲದಲ್ಲಿ ಭಾರತೀಯ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ಅವಮಾನಿಸಿದ ನೀವು (ರಾಹುಲ್) ಒಬ್ಬ ದೇಶದ್ರೋಹಿ’ ಎಂದು ಕಿಡಿಕಾರಿದ್ದಾರೆ. ‘ನೀವು ಮತ್ತು ನಿಮ್ಮ ತಾಯಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೇಶದ ದುಡ್ಡನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ. ಅದರ ವಿರುದ್ಧ ಜಾರಿ ನಿರ್ದೇಶನಾಲಯ ತೆಗೆದುಕೊಂಡ ಕ್ರಮದಿಂದ ಕೋಪಗೊಂಡು ಹೀಗೆಲ್ಲಾ ಮಾತನಾಡುತ್ತಿದ್ದೀರಿ. ಆದರೂ ನೀವಿಬ್ಬರು ಬಚಾವಾಗಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.
Rahul Gandhi, Congress MP and Leader of the Opposition in the Lok Sabha, during an address to the Indian diaspora in Boston on Sunday raised concerns about the integrity of India’s electoral process, drawing a sharp attack from the ruling BJP.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm