ಬ್ರೇಕಿಂಗ್ ನ್ಯೂಸ್
25-04-25 01:16 pm HK News Desk ದೇಶ - ವಿದೇಶ
ಶ್ರೀನಗರ, ಎ.25 : ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಪಾಕಿಸ್ತಾನದ ಒಳಹೊಕ್ಕ ಭಾರತದ ಬಿಎಸ್ಎಫ್ ಯೋಧನನ್ನು ವಶಕ್ಕೆ ಪಡೆದು ಇರಿಸಿಕೊಂಡಿದ್ದು ಮರಳಿ ಹಸ್ತಾಂತರ ಮಾಡಲು ಪಾಕಿಸ್ತಾನ ನಿರಾಕರಿಸಿದೆ.
ಗುರುವಾರ ಸಂಜೆ ಧ್ವಜ ಸಭೆ ಏರ್ಪಡಿಸಿದ್ದರೂ ರೇಂಜರ್ಗಳು ಬಾರದ ಕಾರಣ ನಡೆದಿರಲಿಲ್ಲ. ಇದೇ ವೇಳೆ, ವಶಕ್ಕೆ ಪಡೆದ ಯೋಧನ ಫೋಟೊವನ್ನು ಪಾಕಿಸ್ತಾನದ ಮಿಲಿಟರಿ ಬಿಡುಗಡೆ ಮಾಡಿದೆ.
ಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಗಡಿಭಾಗದಲ್ಲಿ ಆಕಸ್ಮಿಕವಾಗಿ ಪಾಕ್ ಪ್ರದೇಶದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರ ಜೊತೆಗೆ ಯೋಧ ತೆರಳಿದ್ದ. ಗಡಿಯನ್ನು ದಾಟಿದ್ದ 182ನೇ ಬೆಟಾಲಿಯನ್ ಕಾನ್ಸ್ಟೇಬಲ್ ಪಿಕೆ ಸಾಹು ಅವರನ್ನು ಪಾಕಿಸ್ತಾನ ಯೋಧರು ವಶಕ್ಕೆ ಪಡೆದಿದ್ದರು. ಪಿಕೆ ಸಿಂಗ್ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಿವಾಸಿಯಾಗಿದ್ದು ಇತ್ತೀಚೆಗಷ್ಟೇ ಪಾಕ್ ಗಡಿಭಾಗಕ್ಕೆ ನಿಯೋಜಿತನಾಗಿದ್ದ. ಬಂದನಕ್ಕೆ ಒಳಗಾದ ಸಿಂಗ್ ಅವರನ್ನು ಬಿಡುಗಡೆ ಮಾಡಲು ಬಿಎಸ್ಎಫ್ ಪ್ರಯತ್ನ ನಡೆಸುತ್ತಿದೆ.
ಗಡಿಭಾಗದಲ್ಲಿ ತಂತಿ ಬೇಲಿ ಇದ್ದರೂ ಈ ಭಾಗದಲ್ಲಿ ಕೃಷಿ ಮಾಡುವುದಕ್ಕಾಗಿ ರೈತರನ್ನು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಮಾತ್ರ ಬಿಡಲಾಗುತ್ತದೆ. ಕೃಷಿಕರು ಕೆಲಸ ಮಾಡುವಾಗ ನೋಡಿಕೊಳ್ಳಲು ಕಿಸಾನ್ ಗಾರ್ಡ್ ಎಂದು ಬಿಎಸ್ಎಫ್ ಯೋಧರನ್ನು ನಿಯೋಜಿಸಲಾಗುತ್ತದೆ. ಅದೇ ಕೆಲಸಕ್ಕಿದ್ದ ಪಿಕೆ ಸಿಂಗ್ ಸಂಜೆಯ ವೇಳೆಗೆ ತಿಳಿಯದೆ ಪಾಕಿಸ್ತಾನದ ಕಡೆಗೆ ನಡೆದುಹೋಗಿ ಮಿಲಿಟರಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ, ಆತನ ಕೈಯಲ್ಲಿ ಎಕೆ 47 ರೈಫಲ್ ಮತ್ತು ನೀರಿನ ಬಾಟಲ್ ಇತ್ತು.
ಸಿಂಗ್ ಅವರನ್ನು ಗಡಿ ಹೊರ ಠಾಣೆಯಿಂದ ದೂರದಲ್ಲಿರುವ ಪಾಕಿಸ್ತಾನಿ ಪ್ರದೇಶಕ್ಕೆ ಕರೆದುಕೊಂಡು ಹೋಗಲಾಗಿದೆ. ಫಿರೋಜ್ ಪುರ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬಿಎಸ್ ಎಫ್ ನಿಯೋಜನೆ ಮಾಡಲಾಗಿದೆ. ಭಾರತ- ಪಾಕ್ ಮಧ್ಯೆ ಬಿಕ್ಕಟ್ಟು ತಲೆದೋರಿರುವುದರಿಂದ ಭಾರತದ ಯೋಧ ಪಾಕ್ ಸೇನಾಪಡೆಯ ಕೈಯಲ್ಲಿ ಸಿಕ್ಕಿಬಿದ್ದಿರುವುದರಿಂದ ಉಭಯ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದ್ದರೂ ಫಲಪ್ರದವಾಗಿಲ್ಲ.
ರಜೆ ಪಡೆದು ಊರಿಗೆ ಬಂದಿದ್ದ ಪಿಕೆ ಸಿಂಗ್ ಮಾರ್ಚ್ 31 ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಕಳೆದ 17 ವರ್ಷಗಳ ಕಾಲ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
A Border Security Force (BSF) constable, Purnab Kumar Shaw, was detained by Pakistan Rangers on Wednesday after he accidentally crossed the zero line in the Ferozepur sector, officials said on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm