ಬ್ರೇಕಿಂಗ್ ನ್ಯೂಸ್
27-04-25 06:35 pm HK News Desk ದೇಶ - ವಿದೇಶ
ಶ್ರೀನಗರ, ಎ.27 : ಭಯೋತ್ಪಾದಕ ಕೃತ್ಯ ಹಿನ್ನೆಲೆಯಲ್ಲಿ ಭಾರತ – ಪಾಕಿಸ್ಥಾನ ನಡುವೆ ಯುದ್ಧ ಕಾರ್ಮೋಡ ಕವಿದಿದೆ. ಇದಕ್ಕೆ ಇಂಬು ನೀಡುವಂತೆ ಬಿಎಸ್ಎಫ್ ಯೋಧರು ಗಡಿಭಾಗದಲ್ಲಿರುವ ರೈತರನ್ನು ತಮ್ಮ ಜಮೀನು ಬಿಟ್ಟು ದೂರ ಹೋಗುವಂತೆ ಸಲಹೆ ಮಾಡಿದ್ದಾರೆ. 48 ಗಂಟೆ ಒಳಗಡೆ ಎಲ್ಲವನ್ನೂ ಬಿಟ್ಟು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.
ಪಾಕಿಸ್ತಾನ ಗಡಿಭಾಗದ ಜಿಲ್ಲೆಗಳಾದ ಪಂಜಾಬ್ ರಾಜ್ಯದ ಅಮೃತಸರ, ತರಣ್ ತಾರಣ್, ಫಿರೋಜ್ ಪುರ, ಫಾಜಿಲ್ಕಾ ಪ್ರದೇಶದ ಸ್ಥಳೀಯ ಗುರುದ್ವಾರಗಳಲ್ಲಿ ಈ ಬಗ್ಗೆ ಪ್ರಕಟಣೆ ನೀಡಲಾಗುತ್ತಿದ್ದು, ಎರಡು ದಿನಗಳಲ್ಲಿ ಜಾಗ ಬಿಟ್ಟು ಹೋಗದಿದ್ದಲ್ಲಿ ಜನರ ಸಂಚಾರ ಬಂದ್ ಮಾಡಲಾಗುವುದು. ಈ ಪ್ರದೇಶದಲ್ಲಿ ಜನ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸಸ್ಪೆಂಡ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗಡಿ ಪ್ರದೇಶದ 45 ಸಾವಿರ ಎಕ್ರೆ ಕೃಷಿ ಜಮೀನಿನಲ್ಲಿ ಜನರನ್ನು ತೆರವು ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಪೂರ್ತಿಯಾಗಿ ನಿರ್ಜನ ಪ್ರದೇಶ ಎಂದು ಗುರುತಿಸಲಾಗುವುದು. ಗೋಧಿ, ಹತ್ತಿ ಬೆಳೆಗಳನ್ನು ಬೆಳೆಸುತ್ತಿದ್ದ ಈ ಜಾಗದಲ್ಲಿ ಸೇನಾ ಪಡೆಗಳನ್ನು ನಿಯೋಜನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ- ಪಾಕಿಸ್ತಾನ ನಡುವೆ 530 ಕಿಮೀ ಉದ್ದಕ್ಕೆ ಗಡಿಭಾಗವಿದ್ದು, ಇಲ್ಲಿನ ಜನರು ಮೊದಲಿನಿಂದಲೂ ಸೇನಾ ನಿರ್ಬಂಧಗಳ ನಡುವೆಯೇ ಬದುಕುತ್ತಿದ್ದರು. ಭಯೋತ್ಪಾದಕ ದಾಳಿಯ ನಂತರ ಮತ್ತೆ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು ಜನರು ಜಾಗ ಖಾಲಿ ಮಾಡಿ ಇನ್ನೆಲ್ಲೋ ಬದುಕುವ ಸ್ಥಿತಿಗೆ ಒಳಗಾಗಿದ್ದಾರೆ. ಇದೇ ವೇಳೆ, ಪಾಕಿಸ್ಥಾನ ಗಡಿಯಾಚೆಯಲ್ಲಿ ಜನರು ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಇದೇ ವೇಳೆ, ಪಹಲ್ಗಾಮ್ ಭಯೋತ್ಪಾದಕ ಕೃತ್ಯದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಎತ್ತಿಕೊಂಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಬಿಎಸ್ಎಫ್ ಯೋಧರು ಉಗ್ರರಿಗೆ ಬೆಂಬಲ ನೀಡುತ್ತಿರುವ ಜನರನ್ನು ಗುರುತಿಸಿ ಅವರ ಮನೆಗಳನ್ನು ನೆಲಸಮಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಇದೇ ವೇಳೆ, ಸೇನಾ ಕಾರ್ಯಾಚರಣೆ ಸೇರಿದಂತೆ ಯಾವುದನ್ನೂ ನೇರ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಅಲ್ಲದೆ, ಊಹಾಪೋಹದ ಸುದ್ದಿಗಳನ್ನು ಹರಡದಂತೆಯೂ ಸೂಚನೆ ನೀಡಲಾಗಿದೆ. ಯುದ್ಧ ಇನ್ನಿತರ ಸೇನಾ ಕಾರ್ಯಾಚರಣೆಯ ನೇರ ಪ್ರಸಾರದಿಂದ ಜನರ ಮೇಲೆ ನೇತ್ಯಾತ್ಮಕ ಪರಿಣಾಮಗಳಾಗುತ್ತವೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ.
The Border Security Force (BSF) on Saturday issued an urgent directive to farmers along the India-Pakistan border to complete harvesting and clear their fields within 48 hours, as tensions escalate following the Pahalgam terror attack that killed 26 tourists last week.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm