ಬ್ರೇಕಿಂಗ್ ನ್ಯೂಸ್
19-12-20 06:05 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.20: ಪಕ್ಷದ ನಾಯಕತ್ವ ಮತ್ತು ಪಕ್ಷ ಸಂಘಟನೆ ವಿಚಾರದಲ್ಲಿ ಆಕ್ಷೇಪಿಸಿ ಪತ್ರ ಬರೆದಿದ್ದ ನಾಯಕರನ್ನು ಕರೆದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರತೀ ಚುನಾವಣೆಯಲ್ಲಿ ನೆಲೆ ಕಳಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸೋನಿಯಾ ಗಾಂಧಿ, ಪಕ್ಷದ ಮರು ಸಂಘಟನೆಗಾಗಿ ನಾಯಕರ ಅಹವಾಲು ಕೇಳಿದ್ದಾರೆ. ಅಲ್ಲದೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ದೇಶದಲ್ಲಿ ಕೋವಿಡ್ ನಿರ್ಬಂಧ ವಿಧಿಸಿದ ಬಳಿಕ ಸೋನಿಯಾ ಗಾಂಧಿ ಯಾರ ಭೇಟಿಯನ್ನೂ ಮಾಡುತ್ತಿರಲಿಲ್ಲ. ನಿರ್ಬಂಧ ಸಡಿಲಗೊಂಡ ಬಳಿಕ ಪಕ್ಷದ ನಾಯಕರನ್ನು ಖುದ್ದಾಗಿ ಭೇಟಿಯಾಗುತ್ತಿರುವುದು ಇದೇ ಮೊದಲು. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಪ್ರಮುಖ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್, ಶಶಿ ತರೂರ್ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಲ್ಲಿ ಒಂದಷ್ಟು ಮಂದಿಯನ್ನು ಕರೆದು ಸಮಾಧಾನಿಸುವ ಪ್ರಯತ್ನ ಮಾಡಿದ್ದಾರೆ.
ಇಂದಿನ ಸಭೆಯಲ್ಲಿ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಪ್ರಥ್ವಿರಾಜ್ ಚೌಹಾಣ್, ಭೂಪಿಂದರ್ ಸಿಂಗ್ ಹೂಡಾ, ಸಂಸದರಾದ ಮನೀಶ್ ತಿವಾರ್, ವಿವೇಕ್ ತಂಖಾ, ಶಶಿ ತರೂರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್, ಹಿರಿಯ ನಾಯಕ ಚಿದಂಬರಂ ಪಾಲ್ಗೊಂಡಿದ್ದರು. ಅಲ್ಲದೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಆಪ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇತರ ನಾಯಕರನ್ನೂ ಭೇಟಿಯಾಗಿ ಪಕ್ಷದ ಮರು ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm