ಬ್ರೇಕಿಂಗ್ ನ್ಯೂಸ್
19-12-20 06:05 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.20: ಪಕ್ಷದ ನಾಯಕತ್ವ ಮತ್ತು ಪಕ್ಷ ಸಂಘಟನೆ ವಿಚಾರದಲ್ಲಿ ಆಕ್ಷೇಪಿಸಿ ಪತ್ರ ಬರೆದಿದ್ದ ನಾಯಕರನ್ನು ಕರೆದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರತೀ ಚುನಾವಣೆಯಲ್ಲಿ ನೆಲೆ ಕಳಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸೋನಿಯಾ ಗಾಂಧಿ, ಪಕ್ಷದ ಮರು ಸಂಘಟನೆಗಾಗಿ ನಾಯಕರ ಅಹವಾಲು ಕೇಳಿದ್ದಾರೆ. ಅಲ್ಲದೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ದೇಶದಲ್ಲಿ ಕೋವಿಡ್ ನಿರ್ಬಂಧ ವಿಧಿಸಿದ ಬಳಿಕ ಸೋನಿಯಾ ಗಾಂಧಿ ಯಾರ ಭೇಟಿಯನ್ನೂ ಮಾಡುತ್ತಿರಲಿಲ್ಲ. ನಿರ್ಬಂಧ ಸಡಿಲಗೊಂಡ ಬಳಿಕ ಪಕ್ಷದ ನಾಯಕರನ್ನು ಖುದ್ದಾಗಿ ಭೇಟಿಯಾಗುತ್ತಿರುವುದು ಇದೇ ಮೊದಲು. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಪ್ರಮುಖ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್, ಶಶಿ ತರೂರ್ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಲ್ಲಿ ಒಂದಷ್ಟು ಮಂದಿಯನ್ನು ಕರೆದು ಸಮಾಧಾನಿಸುವ ಪ್ರಯತ್ನ ಮಾಡಿದ್ದಾರೆ.
ಇಂದಿನ ಸಭೆಯಲ್ಲಿ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಪ್ರಥ್ವಿರಾಜ್ ಚೌಹಾಣ್, ಭೂಪಿಂದರ್ ಸಿಂಗ್ ಹೂಡಾ, ಸಂಸದರಾದ ಮನೀಶ್ ತಿವಾರ್, ವಿವೇಕ್ ತಂಖಾ, ಶಶಿ ತರೂರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್, ಹಿರಿಯ ನಾಯಕ ಚಿದಂಬರಂ ಪಾಲ್ಗೊಂಡಿದ್ದರು. ಅಲ್ಲದೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಆಪ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇತರ ನಾಯಕರನ್ನೂ ಭೇಟಿಯಾಗಿ ಪಕ್ಷದ ಮರು ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm