ಬ್ರೇಕಿಂಗ್ ನ್ಯೂಸ್
30-04-25 03:14 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಭಾರತೀಯ ಸೇನಾಪಡೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾಳಿ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಿದ್ದಾರೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ದಾಳಿ ಎಸಗುವ ಸಾಧ್ಯತೆಯಿದೆ.
ಪ್ರಧಾನಿ ನಿವಾಸದಲ್ಲಿ ಐದು ಗಂಟೆಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ತ್ರಿವಳಿ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ತನ್ನ ದೇಶದ ಸೇನಾಪಡೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
"ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಅತ್ತೌಲ್ಲಾ ತರಾರ್ ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದಿದ್ದು, ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು "ತಟಸ್ಥ ಆಯೋಗದಿಂದ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸ್ವತಂತ್ರ ತನಿಖೆಗೆ" ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ ಎಂದು ಸಚಿವ ಹೇಳಿದ್ದು, ಭಾರತದ ಯಾವುದೇ ಮಿಲಿಟರಿ ಸಾಹಸಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಲಾಗುವುದು ಎಂದು ಪಾಕಿಸ್ತಾನ ಪುನರುಚ್ಚರಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Pakistan on Wednesday (April 30, 2025), citing “credible intelligence”, claimed that India was planning to carry out military action against it within the next 24 to 36 hours and warned New Delhi that consequences will follow.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am