ಬ್ರೇಕಿಂಗ್ ನ್ಯೂಸ್
11-05-25 11:02 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಪಾಕಿಸ್ತಾನ ತನ್ನ ಮೇಲಾಗಿರುವ ದಾಳಿ, ಅದರಿಂದ ಆಗಿರುವ ನಷ್ಟದ ಬಗ್ಗೆ ಹೇಳಿಕೊಂಡಿಲ್ಲವಾದರೂ ಅಲ್ಲಿನ ಸೇನಾ ನೆಲೆ ಹಾಗೂ ಉಗ್ರರ ಶಿಬಿರಗಳ ಮೇಲೆ ದೊಡ್ಡ ಮಟ್ಟದ ದಾಳಿ ಮಾಡಿರುವ ಕುರಿತಾಗಿ ಭಾರತದ ಮೂರು ಸೇನಾ ಪಡೆಯ ಅಧಿಕಾರಿಗಳು ಫೋಟೋ ಸಹಿತ ಸಾಕ್ಷಿ ತೋರಿಸಿದ್ದಾರೆ. ಉಗ್ರರಿಗೆ ಆಶ್ರಯ ಕೊಟ್ಟಿರುವ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕುರಿತು ಭಾರತದ ಮೂರು ಪಡೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಎ.ಕೆ ಭಾರ್ತಿ ಮಾತನಾಡಿ, ಖಚಿತ ಮಾಹಿತಿ ಆಧರಿಸಿ ಉಗ್ರರ ಅಡುಗುತಾಣಗಳನ್ನು ಗುರಿಯಾಗಿಸಿ ಹೊಡೆದಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ. ನಮ್ಮ ದಾಳಿಯಿಂದ ಹೆದರಿ ಉಗ್ರರು ತಮ್ಮ ನೆಲೆಗಳಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಿದ್ದಾರೆ.


ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ಗುರಿ ಭಯೋತ್ಪಾದಕರ ತಾಣಗಳೇ ಹೊರತು ನಾಗರಿಕರು ಅಲ್ಲ. ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ಕೊಟ್ಟಿದೆ. ಉಗ್ರರ ತರಬೇತಿ ಕೇಂದ್ರಗಳನ್ನು ಧ್ವಂಸ ಮಾಡಲಾಗಿದೆ. ಇದರ ಜೊತೆ ಪ್ರಮುಖ ಉಗ್ರ ಎಂದು ಗುರುತಿಸಲಾದ ಅಬ್ದುಲ್ ಮಲೀಕ್ನನ್ನು ಹೊಡೆ ಹಾಕಲಾಗಿದೆ. 100ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬಾವಲ್ಪುರ, ಮುರಿದ್ಕೆ, ಮರ್ಕಜಾ ಪ್ರದೇಶಗಳಿಗೆ ದಾಳಿ ಮಾಡಿ ಉಗ್ರ ನೆಲೆಗಳನ್ನು ಧ್ವಂಸ ಮಾಡಲಾಗಿದೆ. ವಾಯು ಪ್ರದೇಶದಿಂದ ಕ್ಷಿಪಣಿ ಹಾರಿಸಿ ದಾಳಿ ಮಾಡಿದ್ದೇವೆ. ಪಿಒಕೆ, ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಇನ್ನಿಲ್ಲದಂತೆ ಫಿನಿಶ್ ಮಾಡಿದ್ದೇವೆ. ಆಫರೇಷನ್ ಸಿಂಧೂರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿರುವ ಕುರಿತು ಫೋಟೋಗಳನ್ನು ಬಿಡುಗಡೆ ಮಾಡಿದ್ದು ದಾಳಿಗೆ ಮೊದಲು ಹಾಗೂ ನಂತರದ ಉಗ್ರರ ನೆಲೆಗಳು ಹೇಗೆ ನಾಶವಾದವು ಎಂಬುದನ್ನು ಫೋಟೋದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ಡ್ರೋಣ್, ಫೈಟರ್ ಜೆಟ್ ಮೂಲಕ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಆದರೆ ನಮ್ಮ ಯಾವುದೇ ಸೇನಾ ನೆಲೆಗೂ ತೊಂದರೆ ಎದುರಾಗಿಲ್ಲ ಎಂದು ಹೇಳಿದ್ದಾರೆ.
The Indian Armed Forces on Sunday briefed the nation about the work put into Operation Sindoor that targeted terror infrastructure in PoJK and Pakistan's Punjab province on May 7.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm