ಬ್ರೇಕಿಂಗ್ ನ್ಯೂಸ್
12-05-25 10:21 pm HK News Desk ದೇಶ - ವಿದೇಶ
ನವದೆಹಲಿ, ಮೇ 12: ಎಲ್ಲಿ ಭಯೋತ್ಪಾದನೆ ಇದೆಯೋ ಅಲ್ಲಿ ಮಾತುಕತೆ ಮತ್ತು ವ್ಯವಹಾರ ಸಂಬಂಧ ಇರಲು ಸಾಧ್ಯವಿಲ್ಲ. ನೀರಿನ ಜೊತೆ ಜೊತೆಗೆ ರಕ್ತ ಹರಿಯುವುದಿಲ್ಲ.. ಪಾಕಿಸ್ತಾನದ ಜೊತೆಗೆ ಮಾತುಕತೆ ಆಗುವುದಿದ್ದರೆ ಅದು ಭಯೋತ್ಪಾದನೆ ಮತ್ತು ಪಿಓಕೆ ವಿಚಾರದಲ್ಲಿ ಮಾತ್ರ ಎಂದು ಜಗತ್ತಿಗೆ ಸಾರಿ ಹೇಳುತ್ತೇನೆ.. ಹೀಗೆಂದು ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಕಟು ಮಾತಿನ ಸಂದೇಶ ನೀಡಿದ್ದಾರೆ.
ಪಾಕಿಸ್ತಾನ ವಿರುದ್ಧ ಸೇನಾ ಸಂಘರ್ಷ, ಕದನ ವಿರಾಮದ ಪ್ರಹಸನ, ಸೇನಾಧಿಕಾರಿ ಮಟ್ಟದ ಮಾತುಕತೆ ಬಳಿಕ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನ್ನಾಡಿದ್ದಾರೆ. ಇದು ಯುದ್ಧಕ್ಕೆ ತಕ್ಕುದಾದ ಯುಗವೂ ಅಲ್ಲ ; ಜೊತೆಗೆ ಭಯೋತ್ಪಾದನೆಯ ಯುಗವೂ ಅಲ್ಲ. ಆದರೆ ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನವು ಒಂದು ದಿನ ಅದ ವಿಷದ ಕೂಪಕ್ಕೆ ಬಿದ್ದು ಅಂತ್ಯವಾಗಲಿದೆ. ದೇಶವನ್ನು ಉಗ್ರರಿಂದ ಮುಕ್ತಗೊಳಿಸಿ ಶಾಂತಿಯ ಬೀಜ ಬಿತ್ತದಿದ್ದರೆ ಇಡೀ ದೇಶ ಅದೇ ವಿಷದ ಜ್ವಾಲೆಯಲ್ಲಿ ಸುಟ್ಟು ಹೋಗಲಿದೆ.
ಪಾಕಿಸ್ತಾನ ಪರಮಾಣು ಅಸ್ತ್ರದ ಹೆಸರಲ್ಲಿ ಬ್ಲಾಕ್ಮೇಲ್ ನಡೆಸುವುದನ್ನು ಸಹಿಸುವುದಿಲ್ಲ. ಭಯೋತ್ಪಾದನೆಗೆ ಎದುರಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಲಾಗಿದೆ. ಭಯೋತ್ಪಾದನೆ ವಿರುದ್ಧ ನಾವು ನಮ್ಮ ಸ್ವಂತ ಬಲದಿಂದಲೇ ಪ್ರತಿಕ್ರಿಯೆ ನೀಡಿದ್ದೇವೆ. ಪರಮಾಣು ಶಸ್ತ್ರ ಇದೆಯೆಂದು ಬ್ಲಾಕ್ಮೇಲ್ ನಡೆಸೋದನ್ನು ಭಾರತವು ಇನ್ನೆಂದೂ ಸಹಿಸಲ್ಲ. ಯಾವ ಅಸ್ತ್ರ ಇದೆಯೆಂದು ಬೀಗಿತ್ತೋ ಆ ಅಸ್ತ್ರದ ಶಕ್ತಿಯನ್ನೇ ಉಡುಗಿಸಿದ್ದೇವೆ. ಉಗ್ರವಾದ ಮತ್ತು ಅದರ ಪ್ರಾಯೋಜಕತ್ವವನ್ನು ಪ್ರತ್ಯೇಕವಾಗಿ ನೋಡಲಾಗದು ಎಂದು ಮೋದಿ ಗುಡುಗಿದ್ದಾರೆ.
ಪಾಕಿಸ್ತಾನವು ಉಗ್ರವಾದ ಪರವಾಗಿದೆ ಎನ್ನುವುದನ್ನು ತಾನಾಗಿಯೇ ಜಗತ್ತಿಗೆ ತೋರಿಸಿಕೊಟ್ಟಿದೆ. ಭಾರತವು ಉಗ್ರರ ನೆಲೆಗಳಿಗೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಸೇನೆ ಮತ್ತು ಜನವಸತಿ ಪ್ರದೇಶಕ್ಕೆ ದಾಳಿ ನಡೆಸಿತ್ತು. ಭಾರತದ ಶಾಲೆ, ಗುರುದ್ವಾರ, ದೇವಸ್ಥಾನ, ನಾಗರಿಕರು, ಸೇನಾ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆದರೆ ಪಾಕಿಸ್ತಾನದ ಡ್ರೋಣ್, ಕ್ಷಿಪಣಿ ದಾಳಿಯು ಭಾರತದ ವಾಯು ರಕ್ಷಣಾ ವ್ಯವಸ್ಥೆಯ ಮುಂದೆ ನೆಲ ಕಚ್ಚಿದ್ದನ್ನು ಇಡೀ ಜಗತ್ತು ನೋಡಿದೆ. ಪಾಕಿ ಸೈನಿಕರು ನಮ್ಮ ಗಡಿಭಾಗದಲ್ಲಿ ದಾಳಿ ನಡೆಸುವುದಕ್ಕೆ ಮುಂದಾಗಿದ್ದರೆ, ನಾವು ಅವರ ಸೇನೆಯ ಜಂಘಾಬಲವನ್ನೇ ಉಡುಗಿಸಿದ್ದೇವೆ. ಅವರ ಏರ್ ಬೇಸ್ ಅನ್ನೇ ಪುಡಿಗಟ್ಟಿದ್ದು ನಮ್ಮ ಸೇನಾ ಶಕ್ತಿಯನ್ನು ಜಗತ್ತಿಗೆ ತೋರಿಸಿದಂತಾಗಿತ್ತು. ಇದು ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದರು.
Prime Minister Narendra Modi on Monday asserted that India will not tolerate any “nuclear blackmail”, and said that operations against Pakistan have only been kept in abeyance and the future will depend on their behaviour. Speaking for the first time after Operation Sindoor was launched, the Prime Minister said, “Operation Sindoor is now India’s new policy against terrorism, a new line has been drawn.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm