ಬ್ರೇಕಿಂಗ್ ನ್ಯೂಸ್
14-05-25 07:33 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಅಕಸ್ಮಾತ್ತಾಗಿ ಪಾಕಿಸ್ತಾನದ ವಶಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆಯ ಯೋಧ ಕೊನೆಗೂ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ. ಪಾಕಿಸ್ತಾನ ಸೇನೆಯು ಬುಧವಾರ ಬೆಳಗ್ಗೆ 10.30ಕ್ಕೆ ಅಟ್ಟಾರಿ ವಾಘಾ ಗಡಿಯ ಮೂಲಕ ಬಿಎಸ್ಎಫ್ ಕಾನ್ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದೆ.
ಏಪ್ರಿಲ್ 23 ರಂದು ಆಕಸ್ಮಿಕವಾಗಿ ಪಾಕ್ ಗಡಿಯೊಳಗೆ ಪ್ರವೇಶಿಸಿದ ಶಾ ಅವರನ್ನು 20 ದಿನಗಳ ಕಾಲ ಪಾಕಿಸ್ತಾನಿ ಸೇನೆ ತನ್ನ ವಶದಲ್ಲಿರಿಸಿಕೊಂಡಿತ್ತು. ಯೋಧ ಪೂರ್ಣಮ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಮನೆಗೆ ತೆರಳುವ ಮೊದಲು ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಲಿದ್ದಾರೆ.

ಬಿಎಸ್ಎಫ್ ವಿಭಾಗದಲ್ಲಿ 182ನೇ ಬೆಟಾಲಿಯನ್ ಯೋಧರಾಗಿದ್ದ ಪೂರ್ಣಮ್ ಕುಮಾರ್ ಶಾ ಪಂಜಾಬ್ನ ಫಿರೋಜ್ಪುರ ಗಡಿಭಾಗದಲ್ಲಿ ಆಕಸ್ಮಿಕವಾಗಿ ಸ್ಥಳೀಯ ರೈತರೊಂದಿಗೆ ಪಾಕಿಸ್ತಾನ ಪ್ರವೇಶಿಸಿದ್ದರು. ಸೇನಾ ಸಮವಸ್ತ್ರ ಧರಿಸಿದ್ದ ಪೂರ್ಣಮ್ ಅವರು ವಿಶ್ರಾಂತಿ ಪಡೆಯಲೆಂದು ಸ್ಥಳೀಯ ರೈತರ ಜತೆ ಗಡಿಭಾಗದ ವ್ಯಾಪ್ತಿ ತಿಳಿಯದೆ ಪಾಕಿಸ್ತಾನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಪಾಕಿಸ್ತಾನದ ರೇಂಜರ್ಸ್ ಯೋಧನನ್ನು ವಶಕ್ಕೆ ಪಡೆದಿದ್ದರು. ಯೋಧನ ಬಿಡುಗಡೆಗೆ ಉನ್ನತ ಮಟ್ಟದ ಮಾತುಕತೆ ನಡೆದಿತ್ತಾದರೂ, ಗಡಿಯಲ್ಲಿ ಯುದ್ಧ ಸನ್ನಿವೇಶ ಎದುರಾಗಿದ್ದರಿಂದ ಬಿಡುಗಡೆ ಆಗಿರಲಿಲ್ಲ.
ಉದ್ವಿಗ್ನ ಸ್ಥಿತಿಯ ನಡುವೆ ಯೋಧನ ಬಿಡುಗಡೆಗೆ ಪಾಕಿಸ್ತಾನ ನಿರಾಕರಿಸಿದರೂ, ಮಾತುಕತೆ ಮುಂದುವರಿದಿತ್ತು. ದೇಶದ ರಕ್ಷಣೆಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಮಗನನ್ನು ಸರಕಾರ ಸುರಕ್ಷಿತವಾಗಿ ಬಿಡುಗಡೆ ಮಾಡಿಸುವ ವಿಶ್ವಾಸವಿದೆ ಎಂದು ಯೋಧನ ತಂದೆ ಭೋಲಾನಾಥ್ ತಿಳಿಸಿದ್ದರು.
A Border Security Force (BSF) Constable, who had inadvertently crossed into Pakistani territory along the Punjab border on April 23, was repatriated on Wednesday by the Pakistan Rangers. The exchange took place at the Attari-Wagah border at around 10:30 a.m., according to an official statement issued by the BSF.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm