ಬ್ರೇಕಿಂಗ್ ನ್ಯೂಸ್
19-05-25 02:25 pm HK News Desk ದೇಶ - ವಿದೇಶ
ವಿಶಾಖಪಟ್ಟಣ, ಮೇ 19 : ಮಕ್ಕಳು ಆಟವಾಡುತ್ತಿದ್ದಾಗ ಮಳೆ ಬಂತೆಂದು ಆಶ್ರಯಕ್ಕಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಒಳಗೆ ಹೋಗಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಲಾಕ್ ಆಗಿದ್ದರಿಂದ ಯಾರಿಗೂ ತಿಳಿಯದೆ ನಾಲ್ವರು ಮಕ್ಕಳು ದುರಂತ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದ್ವಾರಮುಡಿ ಗ್ರಾಮದಲ್ಲಿ ನಡೆದಿದೆ.
ಮಾಂಗಿ ಉದಯ್ (8), ಬುರ್ಲೆ ಚಾರುಮತಿ(8), ಬುರ್ಲೆ ಚರಿಷ್ಮಾ(6), ಮನಸ್ವಿನಿ(6) ಮೃತ ಮಕ್ಕಳು. ಈ ಪೈಕಿ ಚಾರುಮತಿ ಮತ್ತು ಚರಿಷ್ಮಾ ಸೋದರಿಯರಾಗಿದ್ದು, ಇನ್ನಿಬ್ವರು ಇವರ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮನೆಯಿಂದ ಹೊರಗಡೆ ಆಡಲು ಹೋಗಿದ್ದ ಮಕ್ಕಳು ತುಂಬ ಹೊತ್ತಾದರೂ ಬಂದಿರಲಿಲ್ಲ. ಆನಂತರ ನಾಲ್ವರು ಮಕ್ಕಳ ಮನೆಮಂದಿ, ಅಕ್ಕ ಪಕ್ಕದ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮೂರು ಗಂಟೆ ಕಾಲ ಹುಡುಕಿದರೂ ಸಿಕ್ಕಿರಲಿಲ್ಲ. ಸಂಜೆ ಹೊತ್ತಿಗೆ ಪಕ್ಕದ ಮಹಿಳಾ ಮಂಡಳಿಯ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನ ಒಳಗಡೆ ಮಕ್ಕಳಿರುವುದು ಪತ್ತೆಯಾಗಿತ್ತು.
ಕೂಡಲೇ ಕಾರಿನ ಗ್ಲಾಸ್ ಒಡೆದು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಉಸಿರಾಟ ಸಾಧ್ಯವಾಗದೆ ಮತ್ತು ಕಾರಿನ ಒಳಗಡೆಯ ಬಿಸಿಯಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ಆಡಲು ಹೋಗಿದ್ದಾಗ ಮಳೆ ಬಂತೆಂದು ಅಲ್ಲಿಯೇ ಇದ್ದ ಕಾರಿನಲ್ಲಿ ಆಸರೆ ಪಡೆದಿದ್ದಾರೆ. ಆದರೆ ಕಾರು ತನ್ನಿಂತಾನೇ ಲಾಕ್ ಆಗಿದ್ದರಿಂದ ಒಳಗಡೆ ಸಿಲುಕಿದ್ದು ನಾಲ್ವರು ಕೂಡ ದುರಂತ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ದು, ಲಾಕ್ ಆಗಿದ್ಯಾ ಎಂದು ಗಮನಿಸದೆ ಬಿಟ್ಟು ಹೋಗಿದ್ದರು. ಮಳೆ ಬರುತ್ತಿದ್ದಾಗ ಸೆನ್ಸಾರ್ ಆಗಿ ಅಕಸ್ಮಾತ್ ಓಪನ್ ಆಗಿದ್ದು, ಮಕ್ಕಳು ಒಳಗಡೆ ಹೋಗಿ ಸಿಕ್ಕಿಕೊಂಡು ಪ್ರಾಣ ತ್ಯಜಿಸಿದ್ದಾರೆ.
In a heart-wrenching tragedy, four children suffocated to death inside a locked car in Andhra Pradesh's Vijayanagaram district on Sunday. The tragedy struck Dwarapudi village under Vijayanagaram Cantonment.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm