ಬ್ರೇಕಿಂಗ್ ನ್ಯೂಸ್
19-05-25 02:25 pm HK News Desk ದೇಶ - ವಿದೇಶ
ವಿಶಾಖಪಟ್ಟಣ, ಮೇ 19 : ಮಕ್ಕಳು ಆಟವಾಡುತ್ತಿದ್ದಾಗ ಮಳೆ ಬಂತೆಂದು ಆಶ್ರಯಕ್ಕಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಒಳಗೆ ಹೋಗಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಲಾಕ್ ಆಗಿದ್ದರಿಂದ ಯಾರಿಗೂ ತಿಳಿಯದೆ ನಾಲ್ವರು ಮಕ್ಕಳು ದುರಂತ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದ್ವಾರಮುಡಿ ಗ್ರಾಮದಲ್ಲಿ ನಡೆದಿದೆ.
ಮಾಂಗಿ ಉದಯ್ (8), ಬುರ್ಲೆ ಚಾರುಮತಿ(8), ಬುರ್ಲೆ ಚರಿಷ್ಮಾ(6), ಮನಸ್ವಿನಿ(6) ಮೃತ ಮಕ್ಕಳು. ಈ ಪೈಕಿ ಚಾರುಮತಿ ಮತ್ತು ಚರಿಷ್ಮಾ ಸೋದರಿಯರಾಗಿದ್ದು, ಇನ್ನಿಬ್ವರು ಇವರ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮನೆಯಿಂದ ಹೊರಗಡೆ ಆಡಲು ಹೋಗಿದ್ದ ಮಕ್ಕಳು ತುಂಬ ಹೊತ್ತಾದರೂ ಬಂದಿರಲಿಲ್ಲ. ಆನಂತರ ನಾಲ್ವರು ಮಕ್ಕಳ ಮನೆಮಂದಿ, ಅಕ್ಕ ಪಕ್ಕದ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮೂರು ಗಂಟೆ ಕಾಲ ಹುಡುಕಿದರೂ ಸಿಕ್ಕಿರಲಿಲ್ಲ. ಸಂಜೆ ಹೊತ್ತಿಗೆ ಪಕ್ಕದ ಮಹಿಳಾ ಮಂಡಳಿಯ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನ ಒಳಗಡೆ ಮಕ್ಕಳಿರುವುದು ಪತ್ತೆಯಾಗಿತ್ತು.
ಕೂಡಲೇ ಕಾರಿನ ಗ್ಲಾಸ್ ಒಡೆದು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಉಸಿರಾಟ ಸಾಧ್ಯವಾಗದೆ ಮತ್ತು ಕಾರಿನ ಒಳಗಡೆಯ ಬಿಸಿಯಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ಆಡಲು ಹೋಗಿದ್ದಾಗ ಮಳೆ ಬಂತೆಂದು ಅಲ್ಲಿಯೇ ಇದ್ದ ಕಾರಿನಲ್ಲಿ ಆಸರೆ ಪಡೆದಿದ್ದಾರೆ. ಆದರೆ ಕಾರು ತನ್ನಿಂತಾನೇ ಲಾಕ್ ಆಗಿದ್ದರಿಂದ ಒಳಗಡೆ ಸಿಲುಕಿದ್ದು ನಾಲ್ವರು ಕೂಡ ದುರಂತ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ದು, ಲಾಕ್ ಆಗಿದ್ಯಾ ಎಂದು ಗಮನಿಸದೆ ಬಿಟ್ಟು ಹೋಗಿದ್ದರು. ಮಳೆ ಬರುತ್ತಿದ್ದಾಗ ಸೆನ್ಸಾರ್ ಆಗಿ ಅಕಸ್ಮಾತ್ ಓಪನ್ ಆಗಿದ್ದು, ಮಕ್ಕಳು ಒಳಗಡೆ ಹೋಗಿ ಸಿಕ್ಕಿಕೊಂಡು ಪ್ರಾಣ ತ್ಯಜಿಸಿದ್ದಾರೆ.
In a heart-wrenching tragedy, four children suffocated to death inside a locked car in Andhra Pradesh's Vijayanagaram district on Sunday. The tragedy struck Dwarapudi village under Vijayanagaram Cantonment.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm