ಬ್ರೇಕಿಂಗ್ ನ್ಯೂಸ್
22-05-25 05:43 pm HK News Desk ದೇಶ - ವಿದೇಶ
ನವದೆಹಲಿ, ಮೇ 22 : 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ದೆಹಲಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಈ ನಿಯೋಗದಲ್ಲಿದ್ದಾರೆ. ಈ ನಿಯೋಗವು ಮೊದಲು ರಷ್ಯಾ ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ (ಮೇ 25), ಗ್ರೀಸ್ (ಮೇ 27), ಲಾಟ್ವಿಯಾ (ಮೇ 29) ಮತ್ತು ಸ್ಪೇನ್ಗೂ (ಮೇ 31) ಭೇಟಿ ನೀಡಲಿದ್ದಾರೆ. ಇದಲ್ಲದೆ, ಶಶಿ ತರೂರ್ ಸೇರಿ ಏಳು ಸಂಸದರ ನೇತೃತ್ವದಲ್ಲಿ ಪ್ರತ್ಯೇಕ ಏಳು ತಂಡಗಳು ಜಗತ್ತಿನ ವಿವಿಧ ದೇಶಗಳಿಗೆ ಹೊರಟಿದೆ.

ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮದ ಜತೆಗೆ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ, " ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ ಭಯೋತ್ಪಾದನೆ ವಿರುದ್ಧ ಅದರಲ್ಲೂ ನಿರ್ದಿಷ್ಟವಾಗಿ ಪಾಕಿಸ್ತಾನ ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿರುವುದು ಹಾಗು ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ.
ಪ್ರಧಾನಮಂತ್ರಿ ಮೋದಿ ಅವರ ಸಂದೇಶದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲ, ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ನಮ್ಮ ಸರ್ವಪಕ್ಷ ನಿಯೋಗವು ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕತೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ" ಎಂದು ಹೇಳಿದ್ದಾರೆ.
Seven Party Delegation Leaves for Abroad, Proud to Convey India’s Message to the World says Mangalore MP Brijesh Chowta.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm