ಬ್ರೇಕಿಂಗ್ ನ್ಯೂಸ್
21-12-20 03:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.

ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm